ಬ್ರೇಕಿಂಗ್ ನ್ಯೂಸ್
04-02-25 11:32 pm HK News Desk ಕರ್ನಾಟಕ
ಹಾವೇರಿ, ಫೆ 04: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ.
ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು;
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿರುವ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ. ಹಾವೇರಿ ತಾಲ್ಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ಕೂಡ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್ಒ ಹಿಂದೇಟು ಹಾಕಿದ್ದಾರೆ.
In a shocking incident, a nurse at the Adoor Primary Health Center in Hanagal taluk, Haveri district, used Feviquick adhesive instead of stitching a deep wound on a 7-year-old boy’s cheek. The incident occurred on January 14 but only came to light later.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am