ಬ್ರೇಕಿಂಗ್ ನ್ಯೂಸ್
04-02-25 11:32 pm HK News Desk ಕರ್ನಾಟಕ
ಹಾವೇರಿ, ಫೆ 04: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ ಸ್ಟಿಚ್ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದಾರೆ.
ಇದು ಪೋಷಕರ ಗಮನಕ್ಕೆ ಬಂದು ಏಕೆ ಹೀಗೆ ಮಾಡಿದ್ರಿ ಎಂದು ದಾದಿಯನ್ನು ಕೇಳಿದಾಗ, ಕೆನ್ನೆಗೆ ಸ್ಟಿಚ್ ಹಾಕಿದ್ರೆ ಕಲೆ ಆಗುತ್ತದೆ. ಅದಕ್ಕೆ ಫೆವಿಕ್ವಿಕ್ ಹಾಕಿದ್ದೇನೆ. ಕಳೆದ ಐದು ವರ್ಷದಿಂದ ಇದನ್ನೇ ಮಾಡುತ್ತಿದ್ದೇನೆ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು;
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿದ್ದಾರೆ. ಈ ಬಗ್ಗೆ ವರದಿ ಪಡೆದು ಕ್ರಮ ಜರುಗಿಸಲು ಮುಂದಾಗಿರುವ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ. ಹಾವೇರಿ ತಾಲ್ಲೂಕು ಗುತ್ತಲ ಆರೋಗ್ಯ ಸಂಸ್ಥೆಗೆ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಫೆವಿಕ್ವಿಕ್ ಹಾಕಿ ನಿರ್ಲಕ್ಷ್ಯ ತೋರಿದರೂ ಕೂಡ ನರ್ಸ್ ಜ್ಯೋತಿ ಅಮಾನತು ಮಾಡಲು ಡಿಹೆಚ್ಒ ಹಿಂದೇಟು ಹಾಕಿದ್ದಾರೆ.
In a shocking incident, a nurse at the Adoor Primary Health Center in Hanagal taluk, Haveri district, used Feviquick adhesive instead of stitching a deep wound on a 7-year-old boy’s cheek. The incident occurred on January 14 but only came to light later.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm