ಬ್ರೇಕಿಂಗ್ ನ್ಯೂಸ್
16-12-20 02:51 pm Headline Karnataka News Network ಕರ್ನಾಟಕ
ಕಾಸರಗೋಡು, ಡಿ.16: ಕೇರಳ ರಾಜ್ಯಾದ್ಯಂತ ಸ್ಥಳೀಯಾಡಳಿತಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಧ್ಯಾಹ್ನ ವರೆಗಿನ ಫಲಿತಾಂಶದಲ್ಲಿ ಕಾಸರಗೋಡು ನಗರಸಭೆಯಲ್ಲಿ ಯುಡಿಎಫ್ ಮತ್ತೆ ಅಧಿಕಾರ ಹಿಡಿದಿದೆ. ಯುಡಿಎಫ್ 21, ಬಿಜೆಪಿ 14 ಹಾಗೂ ಎಲ್ ಡಿಎಫ್ ಒಂದು ಸ್ಥಾನಗಳನ್ನು ಪಡೆದಿದೆ. ಪಕ್ಷೇತರರು ಎರಡು ಸ್ಥಾನ ಗಳಿಸಿದ್ದಾರೆ.
ವರ್ಕಾಡಿ ಬಿಜೆಪಿ 5, ಎಲ್ ಡಿಎಫ್ 6
ಇನ್ನು ವರ್ಕಾಡಿ ಪಂಚಾಯತ್ ನಲ್ಲಿ ಎಲ್ ಡಿಎಪ್ – 6, ಯುಡಿಎಫ್ – 4, ಬಿಜೆಪಿ 5 ಸ್ಥಾನಗಳನ್ನು ಪಡೆದಿದೆ. ಎಸ್ ಡಿಪಿಐ ಒಂದು ಸ್ಥಾನವನ್ನು ಪಡೆದಿದೆ. ಬಿಜೆಪಿ ವರ್ಕಾಡಿ ಪಂಚಾಯತ್ ನಲ್ಲಿ ಇದೇ ಮೊದಲಿಗೆ ಐದು ಸ್ಥಾನಗಳನ್ನು ಗಳಿಸಿದೆ. ಯಾವುದೇ ಪಕ್ಷ ಅಧಿಕಾರ ಪಡೆಯಲು ಬಿಜೆಪಿ ನಿರ್ಣಾಯಕ ಎನಿಸಿದೆ. ಕೊಣಿಬೈಲು ವಾರ್ಡಿನಲ್ಲಿ ಮಮತಾ, ವರ್ಕಾಡಿ ಗೀತಾ ಭಾಸ್ಕರ್, ಕೊಡ್ಲಮೊಗರಿನಲ್ಲಿ ಆಶಾ, ಬೊಡ್ಡೋಡಿ ಪದ್ಮಾವತಿ ಹಾಗೂ ಅರಿಬೈಲು ವಾರ್ಡಿನಲ್ಲಿ ರಾಜ್ ಕುಮಾರ್ ಶೆಟ್ಟಿ ಗೆಲುವು ಕಂಡಿದ್ದಾರೆ. ಅರಿಬೈಲು ವಾರ್ಡಿನಲ್ಲಿ ನಿಕಟ ಪೈಪೋಟಿಯಿದ್ದು ಬಿಜೆಪಿ ಅಭ್ಯರ್ಥಿ 33 ಮತಗಳಿಂದ ಗೆದ್ದಿದ್ದಾರೆ. ರಾಜ್ ಕುಮಾರ್ 457, ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಪುರುಷೋತ್ತಮ 424, ಕಾಂಗ್ರೆಸ್ ಅಭ್ಯರ್ಥಿ ಶರೀಫ್ 338 ಮತಗಳನ್ನು ಪಡೆದಿದ್ದಾರೆ.


ಮೀಂಜದಲ್ಲಿ ಆರು ಬಿಜೆಪಿ, ಎಲ್ ಡಿಎಫ್ 4
ಮೀಂಜ ಪಂಚಾಯತಿನಲ್ಲಿ ಬಿಜೆಪಿ 6, ಎಲ್ ಡಿಎಫ್ 4, ಯುಡಿಎಫ್ 3 ಸ್ಥಾನಗಳನ್ನು ಗೆದ್ದುಕೊಂಡಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ. ಮೀಂಜದಲ್ಲೂ ದೊಡ್ಡ ಪಕ್ಷವಾಗಿ ಮೂಡಿಬಂದಿರುವ ಬಿಜೆಪಿಗೆ ಅಧಿಕಾರ ಪಡೆಯಲು ಎಲ್ ಡಿಎಫ್ ಅಥವಾ ಯುಡಿಎಫ್ ನೆರವು ಪಡೆಯಬೇಕಿದೆ.

ಮಂಜೇಶ್ವರ ಪಂಚಾಯತ್ ನಲ್ಲಿ ಯುಡಿಎಫ್ ಎಂಟು ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 6 ಸ್ಥಾನಗಳನ್ನು ಗೆದ್ದಿದೆ. ಎಲ್ ಡಿಎಫ್ 3, ಎಸ್ ಡಿಪಿಐ 2, ಐಎನ್ ಡಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಅಶ್ವಿನಿ ಪಜ್ವ ಗೆಲುವು ಕಂಡಿದ್ದಾರೆಂದು ಮೂಲಗಳು ತಿಳಿಸಿವೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm