ಬ್ರೇಕಿಂಗ್ ನ್ಯೂಸ್
09-02-25 07:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ಖಾಸಗಿ ಬಸ್ಸೊಂದು ಚಲಿಸುತ್ತಿದ್ದಾಗಲೇ ಟೈರ್ ಸ್ಫೋಟಗೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, ಬಸ್ಸಿನಲ್ಲಿದ್ದ 18 ಮಂದಿ ಪ್ರಯಾಣಿಕರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಅಶೋಕ್ ಅಂಡ್ ಲಾಜಿಸ್ಟಿಕ್ ಟ್ರಾವೆಲ್ಸ್ಗೆ ಸೇರಿದ KA01 AL 5736 ಸಂಖ್ಯೆಯ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ.
ಟೈರ್ ಬ್ಲಾಸ್ಟ್ ಆಗ್ತಿದ್ದಂತೆ ಬಸ್ಸಿನ ವೇಗದಿಂದಾಗಿ ರಸ್ತೆ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು ಧಗ ಧಗನೆ ಹೊತ್ತಿ ಉರಿದಿದೆ.
ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಎಸ್ಪಿ ರಾಘವೇಂದ್ರ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ತಂಡ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಳಿಕ ಟ್ರಾವೆಲ್ಸ್ ಸಂಸ್ಥೆ ಕೇರಳದತ್ತ ತೆರಳುತ್ತಿದ್ದ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A private bus caught fire reportedly after a tire burst while traveling on the Bengaluru-Mysuru Expressway on Sunday. Fortunately, all passengers escaped unhurt. The incident occurred near Sanjo Hospital in Mandya.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm