ಬ್ರೇಕಿಂಗ್ ನ್ಯೂಸ್
09-02-25 07:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ಖಾಸಗಿ ಬಸ್ಸೊಂದು ಚಲಿಸುತ್ತಿದ್ದಾಗಲೇ ಟೈರ್ ಸ್ಫೋಟಗೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, ಬಸ್ಸಿನಲ್ಲಿದ್ದ 18 ಮಂದಿ ಪ್ರಯಾಣಿಕರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಅಶೋಕ್ ಅಂಡ್ ಲಾಜಿಸ್ಟಿಕ್ ಟ್ರಾವೆಲ್ಸ್ಗೆ ಸೇರಿದ KA01 AL 5736 ಸಂಖ್ಯೆಯ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ.
ಟೈರ್ ಬ್ಲಾಸ್ಟ್ ಆಗ್ತಿದ್ದಂತೆ ಬಸ್ಸಿನ ವೇಗದಿಂದಾಗಿ ರಸ್ತೆ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು ಧಗ ಧಗನೆ ಹೊತ್ತಿ ಉರಿದಿದೆ.
ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಎಸ್ಪಿ ರಾಘವೇಂದ್ರ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ತಂಡ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಳಿಕ ಟ್ರಾವೆಲ್ಸ್ ಸಂಸ್ಥೆ ಕೇರಳದತ್ತ ತೆರಳುತ್ತಿದ್ದ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A private bus caught fire reportedly after a tire burst while traveling on the Bengaluru-Mysuru Expressway on Sunday. Fortunately, all passengers escaped unhurt. The incident occurred near Sanjo Hospital in Mandya.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm