ಬ್ರೇಕಿಂಗ್ ನ್ಯೂಸ್
09-02-25 07:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.9: ಖಾಸಗಿ ಬಸ್ಸೊಂದು ಚಲಿಸುತ್ತಿದ್ದಾಗಲೇ ಟೈರ್ ಸ್ಫೋಟಗೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಮಂಡ್ಯದ ಸ್ಯಾಂಜೋ ಆಸ್ಪತ್ರೆ ಸಮೀಪ ಘಟನೆ ನಡೆದಿದ್ದು, ಬಸ್ಸಿನಲ್ಲಿದ್ದ 18 ಮಂದಿ ಪ್ರಯಾಣಿಕರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಅಶೋಕ್ ಅಂಡ್ ಲಾಜಿಸ್ಟಿಕ್ ಟ್ರಾವೆಲ್ಸ್ಗೆ ಸೇರಿದ KA01 AL 5736 ಸಂಖ್ಯೆಯ ಬಸ್ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ.
ಟೈರ್ ಬ್ಲಾಸ್ಟ್ ಆಗ್ತಿದ್ದಂತೆ ಬಸ್ಸಿನ ವೇಗದಿಂದಾಗಿ ರಸ್ತೆ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು ಧಗ ಧಗನೆ ಹೊತ್ತಿ ಉರಿದಿದೆ.
ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಅಗ್ನಿಶಾಮಕ ದಳದ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಡಿಎಸ್ಪಿ ರಾಘವೇಂದ್ರ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು. ಅಗ್ನಿಶಾಮಕ ತಂಡ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಳಿಕ ಟ್ರಾವೆಲ್ಸ್ ಸಂಸ್ಥೆ ಕೇರಳದತ್ತ ತೆರಳುತ್ತಿದ್ದ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A private bus caught fire reportedly after a tire burst while traveling on the Bengaluru-Mysuru Expressway on Sunday. Fortunately, all passengers escaped unhurt. The incident occurred near Sanjo Hospital in Mandya.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm