ಬ್ರೇಕಿಂಗ್ ನ್ಯೂಸ್
10-02-25 01:40 pm HK News Desk ಕರ್ನಾಟಕ
ರಾಮನಗರ, ಫೆ.10: ನಕಲಿ ಚಿನ್ನಾಭರಣ ಅಡವಿಟ್ಟು ಸುಮಾರು 9 ಕೋಟಿ ರೂ. ವಂಚಿಸಿರುವ ಪ್ರಕರಣ ಮಾಗಡಿ ತಾಲೂಕಿನ ಕುದೂರು ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದು ಇದರಲ್ಲಿ ಶಾಸಕ ಬಾಲಕೃಷ್ಣ ಅವರ ಸೋದರನೇ ಶಾಮೀಲಾಗಿದ್ದಾರೆ. ಜಿಲ್ಲಾ ಶಾಖೆಯವರು ಇದರ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.
ರೈತರು ಹಾಗೂ ಸಾರ್ವಜನಿಕರ ಹಣ ದೋಚುವ ಉದ್ದೇಶದಿಂದ ನಕಲಿ ಬಂಗಾರದ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ದೇವ್ ಅವರಿಗೂ ಪತ್ರ ಬರೆದಿದ್ದು ಅವ್ಯವಹಾರಕ್ಕೆ ಕಾರಣರಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದ್ದಾರೆ.
ನಕಲಿ ಚಿನ್ನಾಭರಣ ಅಡಮಾನವಿರಿಸಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್(ತಮ್ಮಾಜಿ) ಅವರು ತಮ್ಮ ಬೆಂಬಲಿಗರಿಗೆ ಸಾಲ ಕೊಡಿಸಿದ್ದಾರೆ ಎನ್ನುವ ಮೂಲಕ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಬಗ್ಗೆಯೂ ಆರೋಪ ಹೊರಿಸಿದರು. ಸದರಿ ಹಗರಣದಲ್ಲಿ ಶಾಖೆಯ ಮ್ಯಾನೇಜರ್, ಚಿನ್ನ ಪರಿವೀಕ್ಷಕ ಮಾತ್ರವಲ್ಲದೆ ಸಿಬ್ಬಂದಿ ಕೂಡ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ ಎಂದು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಮಂಜುನಾಥ್ ಹೇಳಿದ್ದಾರೆ.
ಬಿಡಿಸಿಸಿ ಕುದೂರು ಶಾಖೆಯಲ್ಲಿ ಮ್ಯಾನೇಜರ್ ಆಗಿದ್ದ ವ್ಯಕ್ತಿಯ ವರ್ಗಾವಣೆ ನಂತರ ನಕಲಿ ಚಿನ್ನ ಅಡವಿಟ್ಟಿರುವ ಸಂಗತಿ ಬಹಿರಂಗವಾಗಿದೆ. ಈ ಹಿಂದೆಯೂ ಇದೇ ರೀತಿ ಎಷ್ಟು ಚಿನ್ನ ದುರುಪಯೋಗವಾಗಿರಬಹುದು? ಬಿಡಿಸಿಸಿ ಬ್ಯಾಂಕ್ನ ನಿರ್ದೇಶಕ ಅಶೋಕ್ ಅವರು ಮೂರು ತಿಂಗಳಿಗೊಮ್ಮೆ ಏಕೆ ಸಭೆಗಳನ್ನು ನಡೆಸಲಿಲ್ಲ? ಶಾಖೆ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಯನ್ನು ಮೂರು ವರ್ಷಕ್ಕೊಮ್ಮೆ ವರ್ಗಾವಣೆ ಮಾಡಬೇಕು. ಆದರೆ, ಏಕೆ ಮಾಡಿಲ್ಲ? ಬಿಡಿಸಿಸಿ ಬ್ಯಾಂಕ್ ಅಸ್ತಿತ್ವಕ್ಕೆ ಬಂದಾಗಿನಿಂದ ಡಿಲಿಮಿಟೇಷನ್ ಏಕೆ ಆಗಿಲ್ಲ ಎಂದು ಪ್ರಶ್ನಿಸಿದರು.
Magadi MLA Balakrishna brother alleged of fake gold pledging at bdcc bank in ramnagara.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am