ಬ್ರೇಕಿಂಗ್ ನ್ಯೂಸ್
10-02-25 01:40 pm HK News Desk ಕರ್ನಾಟಕ
ರಾಮನಗರ, ಫೆ.10: ನಕಲಿ ಚಿನ್ನಾಭರಣ ಅಡವಿಟ್ಟು ಸುಮಾರು 9 ಕೋಟಿ ರೂ. ವಂಚಿಸಿರುವ ಪ್ರಕರಣ ಮಾಗಡಿ ತಾಲೂಕಿನ ಕುದೂರು ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದು ಇದರಲ್ಲಿ ಶಾಸಕ ಬಾಲಕೃಷ್ಣ ಅವರ ಸೋದರನೇ ಶಾಮೀಲಾಗಿದ್ದಾರೆ. ಜಿಲ್ಲಾ ಶಾಖೆಯವರು ಇದರ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.
ರೈತರು ಹಾಗೂ ಸಾರ್ವಜನಿಕರ ಹಣ ದೋಚುವ ಉದ್ದೇಶದಿಂದ ನಕಲಿ ಬಂಗಾರದ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ದೇವ್ ಅವರಿಗೂ ಪತ್ರ ಬರೆದಿದ್ದು ಅವ್ಯವಹಾರಕ್ಕೆ ಕಾರಣರಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದ್ದಾರೆ.
ನಕಲಿ ಚಿನ್ನಾಭರಣ ಅಡಮಾನವಿರಿಸಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್(ತಮ್ಮಾಜಿ) ಅವರು ತಮ್ಮ ಬೆಂಬಲಿಗರಿಗೆ ಸಾಲ ಕೊಡಿಸಿದ್ದಾರೆ ಎನ್ನುವ ಮೂಲಕ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಬಗ್ಗೆಯೂ ಆರೋಪ ಹೊರಿಸಿದರು. ಸದರಿ ಹಗರಣದಲ್ಲಿ ಶಾಖೆಯ ಮ್ಯಾನೇಜರ್, ಚಿನ್ನ ಪರಿವೀಕ್ಷಕ ಮಾತ್ರವಲ್ಲದೆ ಸಿಬ್ಬಂದಿ ಕೂಡ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ ಎಂದು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಮಂಜುನಾಥ್ ಹೇಳಿದ್ದಾರೆ.
ಬಿಡಿಸಿಸಿ ಕುದೂರು ಶಾಖೆಯಲ್ಲಿ ಮ್ಯಾನೇಜರ್ ಆಗಿದ್ದ ವ್ಯಕ್ತಿಯ ವರ್ಗಾವಣೆ ನಂತರ ನಕಲಿ ಚಿನ್ನ ಅಡವಿಟ್ಟಿರುವ ಸಂಗತಿ ಬಹಿರಂಗವಾಗಿದೆ. ಈ ಹಿಂದೆಯೂ ಇದೇ ರೀತಿ ಎಷ್ಟು ಚಿನ್ನ ದುರುಪಯೋಗವಾಗಿರಬಹುದು? ಬಿಡಿಸಿಸಿ ಬ್ಯಾಂಕ್ನ ನಿರ್ದೇಶಕ ಅಶೋಕ್ ಅವರು ಮೂರು ತಿಂಗಳಿಗೊಮ್ಮೆ ಏಕೆ ಸಭೆಗಳನ್ನು ನಡೆಸಲಿಲ್ಲ? ಶಾಖೆ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಯನ್ನು ಮೂರು ವರ್ಷಕ್ಕೊಮ್ಮೆ ವರ್ಗಾವಣೆ ಮಾಡಬೇಕು. ಆದರೆ, ಏಕೆ ಮಾಡಿಲ್ಲ? ಬಿಡಿಸಿಸಿ ಬ್ಯಾಂಕ್ ಅಸ್ತಿತ್ವಕ್ಕೆ ಬಂದಾಗಿನಿಂದ ಡಿಲಿಮಿಟೇಷನ್ ಏಕೆ ಆಗಿಲ್ಲ ಎಂದು ಪ್ರಶ್ನಿಸಿದರು.
Magadi MLA Balakrishna brother alleged of fake gold pledging at bdcc bank in ramnagara.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm