ಬ್ರೇಕಿಂಗ್ ನ್ಯೂಸ್
10-02-25 01:40 pm HK News Desk ಕರ್ನಾಟಕ
ರಾಮನಗರ, ಫೆ.10: ನಕಲಿ ಚಿನ್ನಾಭರಣ ಅಡವಿಟ್ಟು ಸುಮಾರು 9 ಕೋಟಿ ರೂ. ವಂಚಿಸಿರುವ ಪ್ರಕರಣ ಮಾಗಡಿ ತಾಲೂಕಿನ ಕುದೂರು ಬಿಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದು ಇದರಲ್ಲಿ ಶಾಸಕ ಬಾಲಕೃಷ್ಣ ಅವರ ಸೋದರನೇ ಶಾಮೀಲಾಗಿದ್ದಾರೆ. ಜಿಲ್ಲಾ ಶಾಖೆಯವರು ಇದರ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ.
ರೈತರು ಹಾಗೂ ಸಾರ್ವಜನಿಕರ ಹಣ ದೋಚುವ ಉದ್ದೇಶದಿಂದ ನಕಲಿ ಬಂಗಾರದ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ದೇವ್ ಅವರಿಗೂ ಪತ್ರ ಬರೆದಿದ್ದು ಅವ್ಯವಹಾರಕ್ಕೆ ಕಾರಣರಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದ್ದಾರೆ.
ನಕಲಿ ಚಿನ್ನಾಭರಣ ಅಡಮಾನವಿರಿಸಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್(ತಮ್ಮಾಜಿ) ಅವರು ತಮ್ಮ ಬೆಂಬಲಿಗರಿಗೆ ಸಾಲ ಕೊಡಿಸಿದ್ದಾರೆ ಎನ್ನುವ ಮೂಲಕ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಬಗ್ಗೆಯೂ ಆರೋಪ ಹೊರಿಸಿದರು. ಸದರಿ ಹಗರಣದಲ್ಲಿ ಶಾಖೆಯ ಮ್ಯಾನೇಜರ್, ಚಿನ್ನ ಪರಿವೀಕ್ಷಕ ಮಾತ್ರವಲ್ಲದೆ ಸಿಬ್ಬಂದಿ ಕೂಡ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ ಎಂದು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಮಂಜುನಾಥ್ ಹೇಳಿದ್ದಾರೆ.
ಬಿಡಿಸಿಸಿ ಕುದೂರು ಶಾಖೆಯಲ್ಲಿ ಮ್ಯಾನೇಜರ್ ಆಗಿದ್ದ ವ್ಯಕ್ತಿಯ ವರ್ಗಾವಣೆ ನಂತರ ನಕಲಿ ಚಿನ್ನ ಅಡವಿಟ್ಟಿರುವ ಸಂಗತಿ ಬಹಿರಂಗವಾಗಿದೆ. ಈ ಹಿಂದೆಯೂ ಇದೇ ರೀತಿ ಎಷ್ಟು ಚಿನ್ನ ದುರುಪಯೋಗವಾಗಿರಬಹುದು? ಬಿಡಿಸಿಸಿ ಬ್ಯಾಂಕ್ನ ನಿರ್ದೇಶಕ ಅಶೋಕ್ ಅವರು ಮೂರು ತಿಂಗಳಿಗೊಮ್ಮೆ ಏಕೆ ಸಭೆಗಳನ್ನು ನಡೆಸಲಿಲ್ಲ? ಶಾಖೆ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಯನ್ನು ಮೂರು ವರ್ಷಕ್ಕೊಮ್ಮೆ ವರ್ಗಾವಣೆ ಮಾಡಬೇಕು. ಆದರೆ, ಏಕೆ ಮಾಡಿಲ್ಲ? ಬಿಡಿಸಿಸಿ ಬ್ಯಾಂಕ್ ಅಸ್ತಿತ್ವಕ್ಕೆ ಬಂದಾಗಿನಿಂದ ಡಿಲಿಮಿಟೇಷನ್ ಏಕೆ ಆಗಿಲ್ಲ ಎಂದು ಪ್ರಶ್ನಿಸಿದರು.
Magadi MLA Balakrishna brother alleged of fake gold pledging at bdcc bank in ramnagara.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am