ಬ್ರೇಕಿಂಗ್ ನ್ಯೂಸ್
10-02-25 10:51 pm HK News Desk ಕರ್ನಾಟಕ
ಮಂಡ್ಯ, ಫೆ 10: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ನಡೆಸುತ್ತಿದ್ದ ಜಿಮ್ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯ (27) ಮೃತ ಮಹಿಳೆ.
ತಾಲೂಕಿನ ಮಾಚಳ್ಳಿ ಗ್ರಾಮದ ಗೋವಿಂದರವರ ಪುತ್ರಿ ದಿವ್ಯ ಅವರನ್ನು ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ದಂಪತಿಗಳಿಬ್ಬರು ಕೆಸ್ತೂರು ಗ್ರಾಮದಲ್ಲಿ ವೈಭವ್ ಫಿಟ್ನೆಸ್ ಎಂಬ ಜಿಮ್ ಅನ್ನು ತೆರೆದು ಜೀವನ ಸಾಗಿಸುತ್ತಿದ್ದೆರನ್ನಲಾಗಿದೆ.
ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣು ;
ಎಂದಿನಂತೆ ಜಿಮ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವ್ಯ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಪತಿ ಗಿರೀಶ್ ಸ್ಥಳದಿಂದ ಪರಾರಿಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಕುಟುಂಬದ ಜಗಳದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಜರು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತಳ ತಂದೆ ಗೋವಿಂದ ನೀಡಿದ ದೂರಿನ ಮೇರೆಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಜಿಮ್ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ತೆರಳಿ ಸಂಬಂಧಿಕರನ್ನು ಹೊರಗೆ ಕಳುಹಿಸಿದ್ದಾರೆ. ಈ ವೇಳೆ ದಿವ್ಯಾಳ ಪತಿ ಗಿರೀಶ್, ಗಿರೀಶ್ ತಾಯಿ ವಿರುದ್ಧ ಗೃಹಿಣಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಅಳಿಯ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ಮೃತಪಟ್ಟಿದ್ದಾಳೆ, ಹೀಗಾಗಿ ಆತನನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.
27 year old wife commits suicide in husbands own gym in Mandya. The diseased as been identified as divya. It is said that she committed this extreme step due to husbands illicit affair
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am