ಬ್ರೇಕಿಂಗ್ ನ್ಯೂಸ್
10-02-25 10:51 pm HK News Desk ಕರ್ನಾಟಕ
ಮಂಡ್ಯ, ಫೆ 10: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಪತಿ ನಡೆಸುತ್ತಿದ್ದ ಜಿಮ್ನಲ್ಲಿಯೇ ಮಹಿಳೆ ನೇಣಿಗೆ ಶರಣಾಗಿದ್ದಾರೆ. ದಿವ್ಯ (27) ಮೃತ ಮಹಿಳೆ.
ತಾಲೂಕಿನ ಮಾಚಳ್ಳಿ ಗ್ರಾಮದ ಗೋವಿಂದರವರ ಪುತ್ರಿ ದಿವ್ಯ ಅವರನ್ನು ಕಳೆದ ಎಂಟು ವರ್ಷಗಳ ಹಿಂದೆ ಕೆಸ್ತೂರು ಗ್ರಾಮದ ಗಿರೀಶ್ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದೆ ದಂಪತಿಗಳಿಬ್ಬರು ಕೆಸ್ತೂರು ಗ್ರಾಮದಲ್ಲಿ ವೈಭವ್ ಫಿಟ್ನೆಸ್ ಎಂಬ ಜಿಮ್ ಅನ್ನು ತೆರೆದು ಜೀವನ ಸಾಗಿಸುತ್ತಿದ್ದೆರನ್ನಲಾಗಿದೆ.
ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣು ;
ಎಂದಿನಂತೆ ಜಿಮ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವ್ಯ ಯಾರು ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಪತಿ ಗಿರೀಶ್ ಸ್ಥಳದಿಂದ ಪರಾರಿಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಕುಟುಂಬದ ಜಗಳದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಜರು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತಳ ತಂದೆ ಗೋವಿಂದ ನೀಡಿದ ದೂರಿನ ಮೇರೆಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ ಜಿಮ್ನಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ತೆರಳಿ ಸಂಬಂಧಿಕರನ್ನು ಹೊರಗೆ ಕಳುಹಿಸಿದ್ದಾರೆ. ಈ ವೇಳೆ ದಿವ್ಯಾಳ ಪತಿ ಗಿರೀಶ್, ಗಿರೀಶ್ ತಾಯಿ ವಿರುದ್ಧ ಗೃಹಿಣಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿಂದ ಅಳಿಯ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದಲೇ ಮಗಳು ಮೃತಪಟ್ಟಿದ್ದಾಳೆ, ಹೀಗಾಗಿ ಆತನನ್ನು ಬಂಧಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.
27 year old wife commits suicide in husbands own gym in Mandya. The diseased as been identified as divya. It is said that she committed this extreme step due to husbands illicit affair
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm