ಬ್ರೇಕಿಂಗ್ ನ್ಯೂಸ್
12-02-25 12:55 pm HK News Desk ಕರ್ನಾಟಕ
ಕಲಬುರಗಿ, ಫೆ.12: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸದ್ಯದಲ್ಲೇ ಬದಲಾವಣೆ ಆಗಲಿದೆ ಎನ್ನುವ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ನಾವು ಎಲ್ಲಾ ಕಡೆ ಮಾಡುತ್ತ ಬಂದಿದ್ದೇವೆ. ಓಡಿಸ್ಸಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೀನಿ. ಏಳೆಂಟು ದಿನಗಳಲ್ಲಿ ಎಲ್ಲ ಕಡೆನೂ ಮುಗಿಸ್ತೀವಿ ಎಂದಿದ್ದಾರೆ.
ಒಡಿಸ್ಸಾದಲ್ಲಿ ಹಿಂದುಳಿದ ವರ್ಗದವರನ್ನು ಅಧ್ಯಕ್ಷ ಸ್ಥಾನಕ್ಕೆ ತರಲಾಗಿದೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತವೆ. ಈ ಬಗ್ಗೆ ಸ್ಪೆಸಿಫಿಕ್ ಆಗಿ ನಾನು ಹೇಳಲಿಕ್ಕಾಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡ್ತಿದ್ದೀವಿ. ಇನ್ನೂ ಒಂದು, ಎರಡು ದಿನದಲ್ಲಿ ಮತ್ತೆ ಒಂದೆರಡು ಸ್ಟೇಟ್ನಲ್ಲಿ ಮಾಡ್ತೇವೆ.
ಏಳೆಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತವೆ ಎಂದು ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಭೇಟಿ ಕುರಿತಾಗಿ ಕೇಳಿದ ಪ್ರಶ್ನೆಗೆ, ನನ್ನನ್ನ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದು ದೊಡ್ಡ ಮಾತಾ? ನಾನು ಎಐಸಿಸಿ ಅಧ್ಯಕ್ಷ.. ಎಲ್ಲರೂ ಬಂದು ಭೇಟಿ ಮಾಡ್ತಾರೆ ಇದು ದೊಡ್ಡ ವಿಚಾರನಾ? ನಮ್ಮ ರಾಜ್ಯದವರಿಗೆ ಬೇಗ ಅಪಾಯಿಂಟಮೆಂಟ್ ಸಿಗುತ್ತೆ.. ಬರ್ತಾರೆ ಬಂದವರಿಗೆ ಬೇಡ ಅನ್ನಲು ಆಗುತ್ತಾ ? ಎಲ್ಲರೂ ಬಂದು ಭೇಟಿ ಆಗ್ತಾರೆ, ಪರಮೇಶ್ವರ ಬರ್ತಾರೆ, ಡಿಕೆ ಶಿವಕುಮಾರ ಬರ್ತಾರೆ, ಸತೀಶ ಜಾರಕಿಹೊಳಿ ಬರ್ತಾರೆ, ಸಿದ್ರಾಮಯ್ಯ ಫೋನ್ ಮಾಡ್ತಾರೆ. ಇದರಲ್ಲಿ ವಿಶೇಷ ಏನಿಲ್ಲ.
ಇದರಲ್ಲಿ ಉಹಾಪೋಹ ಸೃಷ್ಟಿಸಿ ಗೊಂದಲ ಸೃಷ್ಟಿ ಮಾಡಬೇಡಿ. ಬೇಡವಾದ ಗೊಂದಲ ಸೃಷ್ಟಿಸಿ ಸರ್ಕಾರವನ್ನ ಅಸ್ಥಿರಗೊಳಿಸಲು ಯತ್ನ ನಡೀತಿದೆ. ಇದರಿಂದ ನಮ್ಮ ನಾಯಕರೂ ಗೊಂದಲಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದರು.
AICC President Mallikarjun Kharge has hinted that the post of Karnataka Pradesh Congress President will be changed soon. Responding to a media query in Kalaburagi, Kharge said, "We have been doing it everywhere. You have changed the president in Odisha. You will complete everything in seven to eight days."
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm