ಬ್ರೇಕಿಂಗ್ ನ್ಯೂಸ್
13-02-25 05:05 pm HK News Desk ಕರ್ನಾಟಕ
ಕಾರವಾರ, ಫೆ.13: ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ, ಸುಕ್ರಜ್ಜಿ ಎಂದೇ ಹೆಸರಾಗಿದ್ದ ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮ ಗೌಡ(88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸುಕ್ರಜ್ಜಿ ಫೆ.13ರ ಗುರುವಾರ ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.
ಸುಕ್ರಜ್ಜಿ ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಜನಪದ ಹಾಡುಗಾರ್ತಿಯಾಗಿದ್ದು ಅವರನ್ನು ಜಾನಪದ ಕೋಗಿಲೆ ಎಂದೇ ಕರೆಯುತ್ತಿದ್ದರು.
ಸುಕ್ರಿ ಬಾಲ್ಯದಲ್ಲಿ ತನ್ನ ತಾಯಿ ಬಳಿಯಿಂದ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡುಗಳು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಹಾಡುಗಳನ್ನು ಸಂರಕ್ಷಿಸಿ ಬಾಯ್ದೆರೆಯಾಗಿ ಹಾಡುತ್ತ ಅವುಗಳನ್ನು ಸಂಗ್ರಹಿಸಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಸುಕ್ರಜ್ಜಿ ಮುಂಚೂಣಿಯಲ್ಲಿದ್ದರು.
ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ, 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.
Renowned folk singer and Padma Shri awardee Sukri Bommagowda, fondly known as Sukrajji, passed away Thursday morning at her home in the Badageri village of Karnataka’s Uttara Kannada district.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am