ಬ್ರೇಕಿಂಗ್ ನ್ಯೂಸ್
13-02-25 05:05 pm HK News Desk ಕರ್ನಾಟಕ
ಕಾರವಾರ, ಫೆ.13: ಜನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ, ಸುಕ್ರಜ್ಜಿ ಎಂದೇ ಹೆಸರಾಗಿದ್ದ ಹಾಲಕ್ಕಿ ಜನಾಂಗದ ಸುಕ್ರಿ ಬೊಮ್ಮ ಗೌಡ(88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸುಕ್ರಜ್ಜಿ ಫೆ.13ರ ಗುರುವಾರ ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.
ಸುಕ್ರಜ್ಜಿ ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು. ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಜನಪದ ಹಾಡುಗಾರ್ತಿಯಾಗಿದ್ದು ಅವರನ್ನು ಜಾನಪದ ಕೋಗಿಲೆ ಎಂದೇ ಕರೆಯುತ್ತಿದ್ದರು.
ಸುಕ್ರಿ ಬಾಲ್ಯದಲ್ಲಿ ತನ್ನ ತಾಯಿ ಬಳಿಯಿಂದ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡುಗಳು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಹಾಡುಗಳನ್ನು ಸಂರಕ್ಷಿಸಿ ಬಾಯ್ದೆರೆಯಾಗಿ ಹಾಡುತ್ತ ಅವುಗಳನ್ನು ಸಂಗ್ರಹಿಸಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಸುಕ್ರಜ್ಜಿ ಮುಂಚೂಣಿಯಲ್ಲಿದ್ದರು.
ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ, 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.
Renowned folk singer and Padma Shri awardee Sukri Bommagowda, fondly known as Sukrajji, passed away Thursday morning at her home in the Badageri village of Karnataka’s Uttara Kannada district.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm