ಬ್ರೇಕಿಂಗ್ ನ್ಯೂಸ್
13-02-25 07:28 pm HK News Desk ಕರ್ನಾಟಕ
ಗಂಗಾವತಿ, ಫೆ.13: ದೇಗುಲಗಳ ಕಟ್ಟಡ ವಿನ್ಯಾಸ ಮತ್ತು ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಒಬ್ಬರು ನಗರದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿನಯ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಾವತಿಯ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬ್ರಹ್ಮಾವರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.
ಹತ್ತಾರು ದೇಗುಲಗಳ ನಿರ್ಮಾತೃ
ಗಂಗಾವತಿ ಜಿಲ್ಲೆಯಲ್ಲಿದ್ದುಕೊಂಡೇ ಆಕರ್ಷಕ ಶೈಲಿಯ ದೇಗುಲಗಳ ನಿರ್ಮಾಣದಲ್ಲಿ ವಿನಯ್ ಕೆಲಸ ಮಾಡಿದ್ದರು. ಗ್ರಾನೈಟ್, ಅಮೃತ ಶಿಲೆ ಸೇರಿದಂತೆ ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾ ಸಾಮಗ್ರಿ, ಶಿಲೆಗಳನ್ನು ಬಳಸಿಕೊಂಡು ಅತ್ಯಾಕರ್ಷಕ ಶೈಲಿಯಲ್ಲಿ ದೇವಾಲಯಗಳನ್ನು ನಿರ್ಮಿಸುತ್ತಿದ್ದರು. ಗಂಗಾವತಿಯ ನ್ಯಾಯಾಲಯದ ಮುಂದಿರುವ ಕೊಟ್ಟೂರು ಬಸವೇಶ್ವರ ದೇವಸ್ಥಾನ, ಕನಕಗಿರಿ ರಸ್ತೆಯಲ್ಲಿರುವ ಹಾಲುಮತ ಸಮಾಜದ ಬೀರಲಿಂಗೇಶ್ವರ ದೇಗುಲ, ಕಿಂದಿಕ್ಯಾಂಪಿನಲ್ಲಿರುವ ರಾಮ ದೇಗುಲಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿದ್ದರು.
ಗಂಗಾವತಿ ತಾಲೂಕಿನ ಕೋಟಯ್ಯ ಕ್ಯಾಂಪಿನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದಲ್ಲಿ ಶ್ರೀರಾಮ ದೇವರ ದೇವಸ್ಥಾನ ನಿರ್ಮಾಣವನ್ನು ವಿನಯ್ ಕುಮಾರ್ ನೇತೃತ್ವದಲ್ಲಿ ಮಾಡಲಾಗಿತ್ತು.
A young engineer from Udupi, identified as Vinay Kumar, has tragically died by suicide in Gangavathi. He was known for his work building temples
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am