ಬ್ರೇಕಿಂಗ್ ನ್ಯೂಸ್
13-02-25 07:28 pm HK News Desk ಕರ್ನಾಟಕ
ಗಂಗಾವತಿ, ಫೆ.13: ದೇಗುಲಗಳ ಕಟ್ಟಡ ವಿನ್ಯಾಸ ಮತ್ತು ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಒಬ್ಬರು ನಗರದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿನಯ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಾವತಿಯ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬ್ರಹ್ಮಾವರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.
ಹತ್ತಾರು ದೇಗುಲಗಳ ನಿರ್ಮಾತೃ
ಗಂಗಾವತಿ ಜಿಲ್ಲೆಯಲ್ಲಿದ್ದುಕೊಂಡೇ ಆಕರ್ಷಕ ಶೈಲಿಯ ದೇಗುಲಗಳ ನಿರ್ಮಾಣದಲ್ಲಿ ವಿನಯ್ ಕೆಲಸ ಮಾಡಿದ್ದರು. ಗ್ರಾನೈಟ್, ಅಮೃತ ಶಿಲೆ ಸೇರಿದಂತೆ ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾ ಸಾಮಗ್ರಿ, ಶಿಲೆಗಳನ್ನು ಬಳಸಿಕೊಂಡು ಅತ್ಯಾಕರ್ಷಕ ಶೈಲಿಯಲ್ಲಿ ದೇವಾಲಯಗಳನ್ನು ನಿರ್ಮಿಸುತ್ತಿದ್ದರು. ಗಂಗಾವತಿಯ ನ್ಯಾಯಾಲಯದ ಮುಂದಿರುವ ಕೊಟ್ಟೂರು ಬಸವೇಶ್ವರ ದೇವಸ್ಥಾನ, ಕನಕಗಿರಿ ರಸ್ತೆಯಲ್ಲಿರುವ ಹಾಲುಮತ ಸಮಾಜದ ಬೀರಲಿಂಗೇಶ್ವರ ದೇಗುಲ, ಕಿಂದಿಕ್ಯಾಂಪಿನಲ್ಲಿರುವ ರಾಮ ದೇಗುಲಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿದ್ದರು.
ಗಂಗಾವತಿ ತಾಲೂಕಿನ ಕೋಟಯ್ಯ ಕ್ಯಾಂಪಿನಲ್ಲಿ ಕೋಟ್ಯಂತರ ರೂಪಾಯಿ ಮೊತ್ತದಲ್ಲಿ ಶ್ರೀರಾಮ ದೇವರ ದೇವಸ್ಥಾನ ನಿರ್ಮಾಣವನ್ನು ವಿನಯ್ ಕುಮಾರ್ ನೇತೃತ್ವದಲ್ಲಿ ಮಾಡಲಾಗಿತ್ತು.
A young engineer from Udupi, identified as Vinay Kumar, has tragically died by suicide in Gangavathi. He was known for his work building temples
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am