ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am