ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am