ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm