ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm