ಬ್ರೇಕಿಂಗ್ ನ್ಯೂಸ್
14-02-25 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.14: ಅಥಣಿ ಪಟ್ಟಣದ ಶಿವಯೋಗಿ (ಹಲ್ಯಾಳ) ವೃತ್ತದಲ್ಲಿ ರಸ್ತೆ ಬದಿ ನಿಂತಿದ್ದ ಸೈನಿಕನಿಗೆ ಐದಾರು ಪೊಲೀಸರು ಸೇರಿ ಹಲ್ಲೆಗೈದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಘಟನೆ ಖಂಡಿಸಿ ಮಾಜಿ ಸೈನಿಕರು ಸೇರಿ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ವಾಹನದೊಂದಿಗೆ ನಿಂತಿದ್ದ ತನಗೆ ಪೊಲೀಸರು ಏಕವಚನದಲ್ಲಿ ಮಾತನಾಡಿದ್ದರಿಂದ ಸಿಟ್ಟಾದ ಸೈನಿಕ, ತಾನೂ ದೇಶ ಸೇವೆ ಮಾಡೋನು, ಗೌರವ ಕೊಟ್ಟು ಮಾತನಾಡಿ' ಎಂದು ಹೇಳಿದ್ದರು. ಇದರ ಬಗ್ಗೆ ಮಾತಿನ ಚಕಮಕಿ ನಡೆದಿದ್ದು ಪೊಲೀಸರು ಬಳಿಕ ಸೈನಿಕನಿಗೆ ನಡುರಸ್ತೆಯಲ್ಲಿಯೇ ಥಳಿಸಿದ್ದಾರೆ. ಘಟನೆ ಬಳಿಕ ಮಾಜಿ ಸೈನಿಕರ ಸಂಘದ ಸದಸ್ಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೋಲಿಸರು ಬಹಿರಂಗ ಕ್ಷಮೆ ಯಾಚಿಸಿದ ಬಳಿಕ ಮುತ್ತಿಗೆ ಹಿಂಪಡೆದರು.
ಹಲ್ಲೆಗೊಳಗಾದ ಯೋಧ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ' ಗೌರವದಿಂದ ಮಾತನಾಡಿ ಎಂದು ಹೇಳಿದ್ದಕ್ಕೆ ಅವಾಚ್ಯವಾಗಿ ನಿಂದಿಸಿ ಐದಾರು ಪೊಲೀಸರು ಸೇರಿ ನಡು ರಸ್ತೆಯಲ್ಲಿ ಹಲ್ಲೆ ಮಾಡಿದ್ದಾರೆ. ಬಳಿಕ ಠಾಣೆಗೆ ಕರೆತಂದು ಅಲ್ಲಿಯೂ ಅವಾಚ್ಯವಾಗಿ ನಿಂದಿಸಿದ್ದಾರೆ. ನಾವು ಸಹ ದೇಶ ಸೇವೆ ಮಾಡುತ್ತೇವೆ. ಆದರೆ ನಮಗೆ ಸ್ಥಳೀಯವಾಗಿ ಈ ತರಹ ಅಗೌರವ ತೋರಿದ್ದು ಬೇಸರ ತಂದಿದೆ' ಎಂದು ಹೇಳಿದರು.
ಮಾಜಿ ಸೈನಿಕ ಗುರಪ್ಪ ಮಗದುಮ್ ಮಾತನಾಡಿ, 'ವೀರ ಮರಣ ಹೊಂದಿದ ಯೋಧರಿಗೆ ಇಡೀ ದೇಶದಲ್ಲಿಯೇ ಸಾಕಷ್ಟು ಗೌರವ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಪೋಲಿಸರು ಈ ತರಹ ವರ್ತನೆ ಮಾಡಿದ್ದು ಖಂಡನಿಯ. ಇದನ್ನು ಖಂಡಿಸಿ ನಾವು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿದ್ದೆವು, ಆದರೆ ಪೋಲಿಸರು ಬಹಿರಂಗವಾಗಿ ಕ್ಷಮೆ ಕೇಳಿದ್ದಕ್ಕೆ ಮುತ್ತಿಗೆ ಹಿಂಪಡೆದಿದ್ದೇವೆ ಎಂದು ಹೇಳಿದರು.
Army Solider assulted by five police personals in athani in public over minor issue, soldiers gherao police station in Belagavi
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm