ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm