ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am