ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am