ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm