ಬ್ರೇಕಿಂಗ್ ನ್ಯೂಸ್
15-02-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15: ಬೆಂಗಳೂರು - ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ಹೆದ್ದಾರಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ ಸಲ್ಲಿಸಲು ರೆಡಿಯಾಗಿದೆ. ಈ ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಲು ಸುರಂಗ ಮಾರ್ಗ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಸ್ತಾಪ ಕೇಳಿಬಂದಿತ್ತು. ಪ್ರಸ್ತುತ ಹಾಸನ-ಮಂಗಳೂರು ರೈಲ್ವೇ ಮಾರ್ಗದಲ್ಲಿ ಮಾತ್ರ ಸುರಂಗ ಮಾರ್ಗವಿದೆ.
ಸುರಂಗ ಮಾರ್ಗ ನಿರ್ಮಾಣ ಸಂಬಂಧಿಸಿ ಭಾರತೀಯ ವಿಜ್ಞಾನ ಸಂಸ್ಥೆಯ ವರದಿ ಆಧರಿಸಿ ನೀಡಿದ ವಿಸ್ಕೃತ ವರದಿಗೆ ಕೇಂದ್ರ ಅನುಮೋದನೆ ನೀಡಿತ್ತು. ಇದೀಗ ಹೆದ್ದಾರಿ ಪ್ರಾಧಿಕಾರವು 12.60 ಕಿ.ಮೀ ಉದ್ದದ ಆರು ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ. ಈ ಮಾರ್ಗದಲ್ಲಿ ದ್ವಿಮುಖ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡುವ ಜತೆಗೆ ತುರ್ತು ಸಂದರ್ಭಕ್ಕಾಗಿ 8.58 ಮೀ. ವಿಸ್ತಾರದ ತುರ್ತು ಮಾರ್ಗವೂ ಯೋಜನೆಯಲ್ಲಿದೆ. ಶಿರಾಡಿ ಸುರಂಗ ಮಾರ್ಗದ ಕಾಮಗಾರಿಗೆ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಷನ್ ಏಜೆನ್ಸಿ(ಜೆಐಸಿಎ) ಆರ್ಥಿಕ ನೆರವು ಒದಗಿಸಲಿದೆ.
ಸುರಂಗ ಮಾರ್ಗದ ಚಿಂತನೆ ಒಂದೆಡೆಯಾದರೆ ಹಿಂದಿನ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಭೂಕುಸಿತ, ಅನಾಹುತದಿಂದ ಎಚ್ಚೆತ್ತು ಶಿರಾಡಿ ಮಾರ್ಗದ ಹೆದ್ದಾರಿ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ. ಪ್ರತಿ ಮಳೆಗಾಲದಲ್ಲಿ ಭೂಕುಸಿತ, ಸಂಚಾರ ಸ್ಥಗಿತ ಸಮಸ್ಯೆ ಮರುಕಳಿಸುತ್ತಲೇ ಇರುವುದನ್ನು ಮನಗಂಡು ಈಗಾಗಲೇ ಚತುಷ್ಪಥ ರಸ್ತೆ ಹಾಗೂ ಸಕಲೇಶಪುರದಿಂದ ಮಾರನಹಳ್ಳಿ ವರೆಗೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಹಗಲು-ರಾತ್ರಿ ಈ ಕಾಮಗಾರಿ ಮಾಡುವ ಮೂಲಕ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
Mangalore DPR ready for shiradi ghat, 23 kilometer tunnel to be built.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm