ಬ್ರೇಕಿಂಗ್ ನ್ಯೂಸ್
18-02-25 02:59 pm HK News Desk ಕರ್ನಾಟಕ
ಮೈಸೂರು, ಫೆ 19: ಐಪಿಎಲ್ ಹಾಗೂ ಆನ್ಲೈನ್ ಬೆಟ್ಟಿಂಗ್ಗೆ ಚಟಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ ಹಾಗು ಶರ್ಮಿಳಾ ಅಲಿಯಾಸ್ ಸ್ವಾತಿ ಮೃತ ದುರ್ದೈವಿಗಳು. ಜೋಬಿ ಹಾಗೂ ಜೋಷಿ ಅವಳಿ ಜವಳಿ ಸಹೋದರರು.
ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿಗೆ ಮತ್ತು ನಾದಿನಿ ಶರ್ಮಿಳಾ ಆಲಿಯಾಸಿ ಸ್ವಾತಿ ಮೇಲೆ ಮೋಸದ ಆರೋಪ ಹೊರಿಸಿ ಸೋಮವಾರ (ಫೆ.17) ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಜೋಶಿ ವಿಡಿಯೋ ಮಾಡಿದ್ದು, “ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ಮೋಸದಿಂದ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ. ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ ಅವರಿಗೆ ಶಿಕ್ಷೆ ಕೊಡಿಸಿ” ಎಂದು ಹೇಳಿ ನೇಣಿಗೆ ಶರಣದಾಗಿದ್ದಾರೆ.
ಜೋಶಿ ಆಂಥೋನಿ ಸಾವಿನ ವಿಚಾರ ತಿಳಿದು ತಮ್ಮ ಜೋಬಿ l ಹಾಗೂ ಪತ್ನಿ ಶರ್ಮಿಳಾ ಅಲಿಯಾಸ್ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಬಿ ಹಾಗೂ ಶರ್ಮಿಳಾ ಐಪಿಎಲ್ ಹಾಗೂ ಆನ್ ಲೈನ್ ಗೇಮ್ ಗಾಗಿ ಸುಮಾರು 91 ಲಕ್ಷಾ ರೂ. ಸಾಲ ಮಾಡಿಕೊಂಡಿದ್ದರು, ಸಾಲಗಾರರು ಪ್ರತಿ ನಿತ್ಯ ಮನೆಯ ಬಳಿ ಬಂದು ಗಲಾಟೆ ಮಾಡ್ತಿದ್ರು. ಇದರಿಂದ ಮನನೊಂದ ಜೋಷಿ ಆಂಥೋನಿ ಸೋಮವಾರ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು (ಫೆ.18) ಜೋಬಿ ಹಾಗೂ ಶರ್ಮಿಳಾ ವಿಜಯನಗರದ ಕ್ರೀಡಾ ಮೈದಾನದ ಬಳಿ ನೇಣಿಗೆ ಶರಣಾಗಿದ್ದಾರೆ.
ತಂಗಿ ಮೇರಿ ಶರ್ಲೈನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕಾರಣಕ್ಕೆ ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಂಪತಿಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಹೀಗಾಗಿ ಕೇಸ್ಗೆ ಭಯಪಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Three members of a family ended their lives, allegedly after losing money in online gambling in Karnataka's Mysuru district on Tuesday. The incident took place near Hanchya village, close to Mysuru. The deceased were identified as Josh Anthony, his brother Joby Anthony, and Joby's wife Sharmila, also known as Swathi.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm