ಬ್ರೇಕಿಂಗ್ ನ್ಯೂಸ್
20-02-25 02:47 pm HK News Desk ಕರ್ನಾಟಕ
ಮೈಸೂರು, ಫೆ.20: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಲು ಯುವಕರಿಗೆ ಪ್ರಚೋದನೆ ನೀಡಿ ತಲೆಮರೆಸಿಕೊಂಡಿದ್ದ ಮುಸ್ಲಿಂ ಧರ್ಮಗುರು, ಮೌಲ್ವಿ ಮುಫ್ತಿ ಮುಷ್ತಾಕ್ ನನ್ನು ಮೈಸೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿಯೆಂದು ಗುರುತಿಸಲಾಗಿದ್ದ ಮೌಲ್ವಿ ಮುಷ್ತಾಕ್ ಮಕ್ಬೋಲಿಯನ್ನು ಸತತ ಕಾರ್ಯಾಚರಣೆ ಬಳಿಕ ಸಿಸಿಬಿ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಪ್ರಚೋದನಕಾರಿ ಭಾಷಣದ ನಂತರವೇ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿತ್ತು. ಈತನ ಭಾಷಣದ ತುಣುಕುಗಳು ರಾತ್ರೋರಾತ್ರಿ ಎಲ್ಲೆಡೆ ವೈರಲ್ ಆಗಿತ್ತು. ಎಲ್ಲರೂ ಒಗ್ಗಟ್ಟಾಗಿರೋಣ, ಇಸ್ಲಾಮ್ ಧರ್ಮವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮೌಲ್ವಿ ಯುವಕರನ್ನು ಛೂಬಿಡುವ ರೀತಿ ಅಬ್ಬರದ ಭಾಷಣ ಮಾಡಿದ್ದನು.
ಘಟನೆ ನಡೆದು 10 ದಿನಗಳ ಬಳಿಕ ಪ್ರಚೋದನಾಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಬಂಧನವಾಗಿದ್ದು , ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಈತನ ಬಂಧನಕ್ಕಾಗಿ ಬಿಜೆಪಿ ನಾಯಕರು ಸತತ ಹೇಳಿಕೆ ನೀಡಿ ಒತ್ತಡ ತಂತ್ರ ಅನುಸರಿಸಿದ್ದರು.
ಪೋಸ್ಟ್ ಹಾಕಿದ್ದ ಆರೋಪಿ ಗಡೀಪಾರು ಚಿಂತನೆ
ಇದೇ ವೇಳೆ, ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್ ಗಡಿಪಾರು ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನಿನ್ನೆಯಷ್ಟೇ ಜಾಮೀನನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಸತೀಶ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪುನಃ ಗಲಭೆ ಆಗುತ್ತದೆ ಎಂದು ಹೇಳಿ ನಿರ್ದಿಷ್ಟ ಅವಧಿಯವರಗೆ ಜಿಲ್ಲೆಯಿಂದ ಹೊರಗಿರುವಂತೆ ಪೊಲೀಸರ ಸೂಚಿಸಿದ್ದಾರೆ. ಸತೀಶ್ ಹಾಗು ಅವರ ಕುಟುಂಬದ ಹಿತದೃಷ್ಠಿಯಿಂದ ಮತ್ತು ಆಸ್ತಿ- ಪಾಸ್ತಿ ರಕ್ಷಣೆ ಉದ್ದೇಶದಿಂದ ಗಡಿಪಾರು ಮಾಡಲು ಚಿಂತನೆ ಎಂದು ನೋಟಿಸ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.
CCB police on Thursday arrested a cleric who had made provocative speeches in connection with the stone-pelting incident at Udayagiri police station. Mufti Mushtaq is the arrested accused. The police arrested the accused 11 days after the incident. A video of the cleric went viral after the incident.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm