ಬ್ರೇಕಿಂಗ್ ನ್ಯೂಸ್
20-02-25 04:45 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.20: ಮುಜರಾಯಿ ಇಲಾಖೆ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸರ್ಕಾರಿ ಅಧಿಕಾರಿಯೋರ್ವ ಹೆಂಡತಿ ಖಾತೆಗೆ ಹಾಕಿಸಿಕೊಂಡು ಮೋಜು ಮಸ್ತಿ ಮಾಡಿ, ಮನೆಯನ್ನೂ ಕಟ್ಟಿಸಿಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್ ಸರ್ಕಾರಿ ಖಜಾನೆಯ ಹಣವನ್ನು ಲಪಟಾಯಿಸಿ ಸಿಕ್ಕಿಬಿದ್ದಿದ್ದಾನೆ. ಈ ಹಿಂದೆ ಮುಜರಾಯಿ ಇಲಾಖೆಯಲ್ಲಿ ಹೇಮಂತ್ ಕುಮಾರ್ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ಅರಿತುಕೊಂಡಿದ್ದ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯಿಂದ 2023- 24ರಲ್ಲಿ ಇಬ್ಬರು ತಹಶೀಲ್ದಾರ್ ಸಹಿ ಪಡೆದು ಮತ್ತು ಸೀಲ್ ನಕಲಿ ಮಾಡಿ ಸುಮಾರು 60 ಲಕ್ಷ ರೂ. ಹಣವನ್ನ ಸ್ವಂತ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾನೆ.
ಆನಂತರ, ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಮಾಡಿಕೊಂಡಿದ್ದರೂ ಮುಜರಾಯಿ ಇಲಾಖೆಯ ಚೆಕ್ ಬುಕ್ಗಳನ್ನು ಮರಳಿ ಇಲಾಖೆಗೆ ನೀಡದೇ ತನ್ನ ಬಳಿಯೇ ಉಳಿಸಿಕೊಂಡಿದ್ದ. ಅಧಿಕಾರಿಗಳು ಕೇಳಿದಾಗ ಅವರಿಗೆ ಕೊಟ್ಟಿದ್ದೇನೆ, ಇವರಿಗೆ ಕೊಟ್ಟಿದ್ದೇನೆ ಎಂದು ಮರೆಮಾಚಿ, ಹಣ ಡ್ರಾ ಮಾಡಿದ್ದಾನೆ. ಎರಡು ಮೂರು ವರ್ಷದಲ್ಲಿ ಬರೋಬ್ಬರಿ 60 ಲಕ್ಷಕ್ಕೂ ಹೆಚ್ಚು ಹಣವನ್ನು ಹಂತ ಹಂತವಾಗಿ ಹೆಂಡತಿ ಸೇರಿ ಇತರರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ.
ತಹಶೀಲ್ದಾರ್ ಮುಜರಾಯಿ ಇಲಾಖೆ ಖಾತೆಯ ಹಣದ ಬಗ್ಗೆ ಪರಿಶೀಲನೆ ಮಾಡಿದಾಗ ಅನುಮಾನ ಬಂದಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಖಚಿತ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿ ಮುಜರಾಯಿ ಖಜಾನೆಯಿಂದ ಪಡೆದ ಹಣದಲ್ಲಿ ಮನೆಯನ್ನ ಕಟ್ಟಿಕೊಂಡಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ.
ಪ್ರಕರಣ ಬೆಳಕಿಗೆ ಬಂದು ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ಗಂಡ ಲೂಟಿ ಮಾಡಿದ್ದ 60 ಲಕ್ಷ ರೂ. ಹಣವನ್ನ ಹೆಂಡತಿ ಮರಳಿ ಮುಜರಾಯಿ ಇಲಾಖೆಯ ಖಾತೆಗಳಿಗೆ ವಾಪಸ್ ಹಾಕಿದ್ದಾಳೆ. ಇದೇ ವೇಳೆ, ರೆವಿನ್ಯು ಇನ್ಸ್ ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್ನನ್ನ ಸೇವೆಯಿಂದ ಅಮಾನತು ಮಾಡಿದ್ದು, ತಹಸೀಲ್ದಾರ್ ಇಲಾಖಾ ವಿಚಾರಣೆಗೆ ಒಳಪಡಿಸಿದ್ದಾರೆ.
Chikkaballapur 60 lakhs transferred from muzrai account to wife's account by revenue inspector , Tahsildar exposes scam, Revenue Inspector Hemanth Kumar has been arrested and sent to jail
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm