ಬ್ರೇಕಿಂಗ್ ನ್ಯೂಸ್
20-02-25 04:45 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.20: ಮುಜರಾಯಿ ಇಲಾಖೆ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸರ್ಕಾರಿ ಅಧಿಕಾರಿಯೋರ್ವ ಹೆಂಡತಿ ಖಾತೆಗೆ ಹಾಕಿಸಿಕೊಂಡು ಮೋಜು ಮಸ್ತಿ ಮಾಡಿ, ಮನೆಯನ್ನೂ ಕಟ್ಟಿಸಿಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್ ಸರ್ಕಾರಿ ಖಜಾನೆಯ ಹಣವನ್ನು ಲಪಟಾಯಿಸಿ ಸಿಕ್ಕಿಬಿದ್ದಿದ್ದಾನೆ. ಈ ಹಿಂದೆ ಮುಜರಾಯಿ ಇಲಾಖೆಯಲ್ಲಿ ಹೇಮಂತ್ ಕುಮಾರ್ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ಅರಿತುಕೊಂಡಿದ್ದ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯಿಂದ 2023- 24ರಲ್ಲಿ ಇಬ್ಬರು ತಹಶೀಲ್ದಾರ್ ಸಹಿ ಪಡೆದು ಮತ್ತು ಸೀಲ್ ನಕಲಿ ಮಾಡಿ ಸುಮಾರು 60 ಲಕ್ಷ ರೂ. ಹಣವನ್ನ ಸ್ವಂತ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾನೆ.
ಆನಂತರ, ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಮಾಡಿಕೊಂಡಿದ್ದರೂ ಮುಜರಾಯಿ ಇಲಾಖೆಯ ಚೆಕ್ ಬುಕ್ಗಳನ್ನು ಮರಳಿ ಇಲಾಖೆಗೆ ನೀಡದೇ ತನ್ನ ಬಳಿಯೇ ಉಳಿಸಿಕೊಂಡಿದ್ದ. ಅಧಿಕಾರಿಗಳು ಕೇಳಿದಾಗ ಅವರಿಗೆ ಕೊಟ್ಟಿದ್ದೇನೆ, ಇವರಿಗೆ ಕೊಟ್ಟಿದ್ದೇನೆ ಎಂದು ಮರೆಮಾಚಿ, ಹಣ ಡ್ರಾ ಮಾಡಿದ್ದಾನೆ. ಎರಡು ಮೂರು ವರ್ಷದಲ್ಲಿ ಬರೋಬ್ಬರಿ 60 ಲಕ್ಷಕ್ಕೂ ಹೆಚ್ಚು ಹಣವನ್ನು ಹಂತ ಹಂತವಾಗಿ ಹೆಂಡತಿ ಸೇರಿ ಇತರರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ.
ತಹಶೀಲ್ದಾರ್ ಮುಜರಾಯಿ ಇಲಾಖೆ ಖಾತೆಯ ಹಣದ ಬಗ್ಗೆ ಪರಿಶೀಲನೆ ಮಾಡಿದಾಗ ಅನುಮಾನ ಬಂದಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಖಚಿತ ಮಾಹಿತಿಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿ ಮುಜರಾಯಿ ಖಜಾನೆಯಿಂದ ಪಡೆದ ಹಣದಲ್ಲಿ ಮನೆಯನ್ನ ಕಟ್ಟಿಕೊಂಡಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ.
ಪ್ರಕರಣ ಬೆಳಕಿಗೆ ಬಂದು ಪೊಲೀಸರು ತನಿಖೆ ಕೈಗೆತ್ತಿಕೊಂಡ ಬಳಿಕ ಗಂಡ ಲೂಟಿ ಮಾಡಿದ್ದ 60 ಲಕ್ಷ ರೂ. ಹಣವನ್ನ ಹೆಂಡತಿ ಮರಳಿ ಮುಜರಾಯಿ ಇಲಾಖೆಯ ಖಾತೆಗಳಿಗೆ ವಾಪಸ್ ಹಾಕಿದ್ದಾಳೆ. ಇದೇ ವೇಳೆ, ರೆವಿನ್ಯು ಇನ್ಸ್ ಪೆಕ್ಟರ್ ಆಗಿದ್ದ ಹೇಮಂತ್ ಕುಮಾರ್ನನ್ನ ಸೇವೆಯಿಂದ ಅಮಾನತು ಮಾಡಿದ್ದು, ತಹಸೀಲ್ದಾರ್ ಇಲಾಖಾ ವಿಚಾರಣೆಗೆ ಒಳಪಡಿಸಿದ್ದಾರೆ.
Chikkaballapur 60 lakhs transferred from muzrai account to wife's account by revenue inspector , Tahsildar exposes scam, Revenue Inspector Hemanth Kumar has been arrested and sent to jail
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm