ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm