ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm