ಬ್ರೇಕಿಂಗ್ ನ್ಯೂಸ್
17-12-20 11:09 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಪಿ.ವಿ. ಲಕ್ಷ್ಮೀ (33) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಲಕ್ಷ್ಮೀ ಅಲ್ಲಿಯೇ ಕೊಠಡಿ ಒಂದರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ 10.30ರ ಹೊತ್ತಿಗೆ ನೇಣು ಬಿಗಿದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಲಕ್ಷ್ಮೀ ಅವರು 2014ರ ಬ್ಯಾಚ್ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿ ವಿಭಾಗಕ್ಕೆ ಡಿವೈಎಸ್ಪಿ ನೇಮಕವಾಗಿದ್ದರು. ಲಕ್ಷ್ಮೀ ಪ್ರೊಬೇಷನರಿ ಬಳಿಕ ಮೊದಲ ಬಾರಿಗೆ ಸಿಐಡಿಗೆ ಡಿವೈಎಸ್ಪಿ ಆಗಿ ಪೋಸ್ಟಿಂಗ್ ಆಗಿದ್ದರು. ತನಿಖೆ ಮುಂದುವರಿದಿದ್ದು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದೆ.
ಮಾನಸಿಕವಾಗಿ ಖಿನ್ನರಾಗಿದ್ದರೇ ಮೇಲಧಿಕಾರಿಗಳ ಕಿರುಕುಳ ಇತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಒಂದೇ ಕಡೆ ಇದ್ದು ಬೇರೆ ಪೋಸ್ಟಿಂಗ್ ಮಾಡದಿರುವುದು ಚಿಂತೆಗೆ ಕಾರಣ ಆಗಿತ್ತು ಎನ್ನಲಾಗಿದೆ.
ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ..!
ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದ ಲಕ್ಷ್ಮೀಗೆ ಮಕ್ಕಳಾಗಿರಲಿಲ್ಲ ಎಂಬ ಚಿಂತೆ ಇತ್ತು. ಜೊತೆಗೆ, ಖಾಸಗಿ ಕಂಪನಿಯಲ್ಲಿ ಉದ್ಯೋಗಿ ಆಗಿದ್ದ ಪತಿಯ ಜೊತೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಸ್ನೇಹಿತೆಯ ಜೊತೆ ಹೇಳಿಕೊಂಡು ಕೊರಗುತ್ತಿದ್ದರು. ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದ ಸ್ನೇಹಿತೆಯ ಮನೆಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿದ ಬಳಿಕ ಕೊಠಡಿಗೆ ತೆರಳಿದ ಲಕ್ಷ್ಮೀ ಹೊರಗೆ ಬಾರದೆ ಬಾಗಿಲು ಹಾಕ್ಕೊಂಡಿದ್ದರು. ಬಾಗಿಲು ತೆರೆಯದ್ದರಿಂದ ಸಂಶಯ ಬಂದು ಬಾಗಿಲು ಒಡೆದು ನೋಡಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಲಕ್ಷ್ಮೀ ಮೂಲತಃ ಕೋಲಾರ ಜಿಲ್ಲೆಯ ಮೂಲದವರಾಗಿದ್ದರು.
A lady CID officer in Bengaluru committed suicide on Wednesday night. She has been identified as PV Laxmi. The DSP-rank official was posted in the Criminal Investigation Department here.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm