ಬ್ರೇಕಿಂಗ್ ನ್ಯೂಸ್
21-02-25 04:36 pm HK News Desk ಕರ್ನಾಟಕ
ದಾವಣಗೆರೆ, ಫೆ 21: ಕೇಂದ್ರ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದೆ. ದೇಶ ಇನ್ನಾದರೂ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಬಿಜೆಪಿ ಅಧಿಕಾರದಲ್ಲಿ ಇರಬಾರದು, ಅದು ದೇಶದಿಂದ ತೊಲಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ದೇಶದ ಜನಾಭಿಪ್ರಾಯ ಬಿಜೆಪಿಗೆ ಸಿಕ್ಕಿದೆ. ದೇಶದ ಒಳಿತಿಗೆ ಪ್ರಧಾನಿ ಬದಲಾಗಬೇಕು ಎಂದು ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ದೇಶವನ್ನು ಒಬ್ಬರೇ ನಡೆಸಲು ಸಾಧ್ಯವಿಲ್ಲ. ಕೇಂದ್ರದ ಐವರು ಸಚಿವರ ಹೆಸರು ಜನರಿಗೆ ಗೊತ್ತಿಲ್ಲ. ಮಾಧ್ಯಮಗಳು ಪ್ರಧಾನಿ ಮೋದಿ ಅವರನ್ನ ಹೀರೋ ಮಾಡಿವೆ. ದೀಪಾವಳಿಯಲ್ಲಿ ಸಿಡಿಸುವ ಪಟಾಕಿ ಕೂಡ ಚೀನಾದಿಂದ ಬರುತ್ತಿದೆ. ಹಾಗದರೆ ಮೇಕ್ ಇನ್ ಇಂಡಿಯಾ ಏನಾಯಿತು ಎಂದು ಪ್ರಶ್ನಿಸಿದರು.
ಕುಂಭಮೇಳದಲ್ಲಿ ನೀರು ಕಲುಷಿತಗೊಂಡಿರುವುದನ್ನು ವರದಿಗಳು ಖಚಿತಪಡಿಸಿವೆ. ಭಕ್ತರಿಗೆ ಕಲ್ಪಿಸಿದ ವ್ಯವಸ್ಥೆಯಲ್ಲಿ ತಾರತಮ್ಯ ಮಾಡಲಾಗಿದೆ. ಶ್ರೀಮಂತರಿಗೆ ಲಕ್ಷಾಂತರ ರೂಪಾಯಿ ಟೆಂಟ್ಗಳಿವೆ. ಬಡವರು ಪುಣ್ಯ ಸ್ನಾನಕ್ಕೆ ಹಲವು ದಿನ ಕಾಯಬೇಕಿದೆ. ಕಾಲ್ತುಳಿತದಲ್ಲಿ ಮೃತಪಟ್ಟರ ಲೆಕ್ಕವನ್ನೂ ಸರ್ಕಾರ ಸರಿಯಾಗಿ ತಿಳಿಸಲಿಲ್ಲ. ದೆಹಲಿಯ ಸಂಸತ್ ಭವನದಿಂದ 3 ಕಿ.ಮೀ ದೂರದ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಪ್ರಾಣ ಕಳೆದುಕೊಂಡರು. ಸೌಜನ್ಯಕ್ಕೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಭೇಟಿ ನೀಡಲಿಲ್ಲ ಎಂದು ಕಿಡಿಕಾರಿದರು.
'ಮುಡಾ' ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ಚಿಟ್ ಸಿಕ್ಕಿದೆ. ಇದು ನ್ಯಾಯಕ್ಕೆ ಸಂದ ಜಯ. ದೇಶದ ಏಕೈಕ ಹಿಂದುಳಿದ ಸಮುದಾಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ತೊಂದರೆ ನೀಡಬೇಕು ಎಂಬ ಬಿಜೆಪಿ ಹುನ್ನಾರ ಸಫಲವಾಗಿಲ್ಲ. 'ಮುಡಾ' ಪ್ರಕರಣದಲ್ಲಿ ಕೇವಲ 14 ನಿವೇಶನಗಳ ಬಗ್ಗೆ ಮಾತ್ರ ಚರ್ಚೆ ಆಯಿತು. ಇನ್ನೂ ಬಾಕಿ ಇರುವ 110 ನಿವೇಶನಗಳ ಬಗ್ಗೆಯೂ ಚರ್ಚೆ ಆಗುವ ಅಗತ್ಯ ಇದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
Santosh lad demands change of prime minster, Nitin Gadkari should be the PM of india. Says BJP party must leave india, modi must resign and Nitin Gadkari should be the PM of india he added.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 05:27 pm
HK News Staffer
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm