ಬ್ರೇಕಿಂಗ್ ನ್ಯೂಸ್
21-02-25 04:36 pm HK News Desk ಕರ್ನಾಟಕ
ದಾವಣಗೆರೆ, ಫೆ 21: ಕೇಂದ್ರ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದೆ. ದೇಶ ಇನ್ನಾದರೂ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಒಳಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಬಿಜೆಪಿ ಅಧಿಕಾರದಲ್ಲಿ ಇರಬಾರದು, ಅದು ದೇಶದಿಂದ ತೊಲಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ದೇಶದ ಜನಾಭಿಪ್ರಾಯ ಬಿಜೆಪಿಗೆ ಸಿಕ್ಕಿದೆ. ದೇಶದ ಒಳಿತಿಗೆ ಪ್ರಧಾನಿ ಬದಲಾಗಬೇಕು ಎಂದು ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ದೇಶವನ್ನು ಒಬ್ಬರೇ ನಡೆಸಲು ಸಾಧ್ಯವಿಲ್ಲ. ಕೇಂದ್ರದ ಐವರು ಸಚಿವರ ಹೆಸರು ಜನರಿಗೆ ಗೊತ್ತಿಲ್ಲ. ಮಾಧ್ಯಮಗಳು ಪ್ರಧಾನಿ ಮೋದಿ ಅವರನ್ನ ಹೀರೋ ಮಾಡಿವೆ. ದೀಪಾವಳಿಯಲ್ಲಿ ಸಿಡಿಸುವ ಪಟಾಕಿ ಕೂಡ ಚೀನಾದಿಂದ ಬರುತ್ತಿದೆ. ಹಾಗದರೆ ಮೇಕ್ ಇನ್ ಇಂಡಿಯಾ ಏನಾಯಿತು ಎಂದು ಪ್ರಶ್ನಿಸಿದರು.
ಕುಂಭಮೇಳದಲ್ಲಿ ನೀರು ಕಲುಷಿತಗೊಂಡಿರುವುದನ್ನು ವರದಿಗಳು ಖಚಿತಪಡಿಸಿವೆ. ಭಕ್ತರಿಗೆ ಕಲ್ಪಿಸಿದ ವ್ಯವಸ್ಥೆಯಲ್ಲಿ ತಾರತಮ್ಯ ಮಾಡಲಾಗಿದೆ. ಶ್ರೀಮಂತರಿಗೆ ಲಕ್ಷಾಂತರ ರೂಪಾಯಿ ಟೆಂಟ್ಗಳಿವೆ. ಬಡವರು ಪುಣ್ಯ ಸ್ನಾನಕ್ಕೆ ಹಲವು ದಿನ ಕಾಯಬೇಕಿದೆ. ಕಾಲ್ತುಳಿತದಲ್ಲಿ ಮೃತಪಟ್ಟರ ಲೆಕ್ಕವನ್ನೂ ಸರ್ಕಾರ ಸರಿಯಾಗಿ ತಿಳಿಸಲಿಲ್ಲ. ದೆಹಲಿಯ ಸಂಸತ್ ಭವನದಿಂದ 3 ಕಿ.ಮೀ ದೂರದ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಪ್ರಾಣ ಕಳೆದುಕೊಂಡರು. ಸೌಜನ್ಯಕ್ಕೂ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಭೇಟಿ ನೀಡಲಿಲ್ಲ ಎಂದು ಕಿಡಿಕಾರಿದರು.
'ಮುಡಾ' ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ಚಿಟ್ ಸಿಕ್ಕಿದೆ. ಇದು ನ್ಯಾಯಕ್ಕೆ ಸಂದ ಜಯ. ದೇಶದ ಏಕೈಕ ಹಿಂದುಳಿದ ಸಮುದಾಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ತೊಂದರೆ ನೀಡಬೇಕು ಎಂಬ ಬಿಜೆಪಿ ಹುನ್ನಾರ ಸಫಲವಾಗಿಲ್ಲ. 'ಮುಡಾ' ಪ್ರಕರಣದಲ್ಲಿ ಕೇವಲ 14 ನಿವೇಶನಗಳ ಬಗ್ಗೆ ಮಾತ್ರ ಚರ್ಚೆ ಆಯಿತು. ಇನ್ನೂ ಬಾಕಿ ಇರುವ 110 ನಿವೇಶನಗಳ ಬಗ್ಗೆಯೂ ಚರ್ಚೆ ಆಗುವ ಅಗತ್ಯ ಇದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
Santosh lad demands change of prime minster, Nitin Gadkari should be the PM of india. Says BJP party must leave india, modi must resign and Nitin Gadkari should be the PM of india he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm