ಬ್ರೇಕಿಂಗ್ ನ್ಯೂಸ್
26-02-25 06:14 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26 : ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಹೊಡೆತ ಜೋರಾಗಿರುವಂತೆಯೇ ಹವಾಮಾನ ಇಲಾಖೆ ಅಲರ್ಟ್ ಸೂಚನೆ ನೀಡಿದ್ದು ಮುಂದಿನ ಮೂರು ದಿನಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಿರಲಿದ್ದು, ಜನರು ಮಧ್ಯಾಹ್ನ ಸಮಯದಲ್ಲಿ ಹೆಚ್ಚು ಓಡಾಡದಂತೆ ಎಚ್ಚರಿಕೆ ನೀಡಿದೆ.
ಕರಾವಳಿಯಲ್ಲಿ ಉರಿ ಬಿಸಿಲು ಜೊತೆಗೆ ಭಾರೀ ಸೆಕೆಯ ಅನುಭವ ಆಗುತ್ತಿದೆ. ಬಿಸಿ ಅಲೆಯ ಪರಿಸ್ಥಿತಿಗಳು ಹೆಚ್ಚಲಿದ್ದು ಗರಿಷ್ಠ ಉಷ್ಣತೆ 35-38 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದ್ದು ಇದರ ತಾಪಮಾನ 40-50 ಡಿಗ್ರಿಯಷ್ಟು ಅನುಭವಕ್ಕೆ ಬರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಈ ಅಲರ್ಟ್ ನೀಡಲಾಗಿದೆ.
ಹೊರ ಹೋಗದಂತೆ ಮುನ್ಸೂಚನೆ
37-39 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಮಧ್ಯಾಹ್ನ 12 ರಿಂದ 3ರ ವರೆಗೆ ಹೆಚ್ಚು ಸಮಯ ಬಿಸಿಲಿಗೆ ಒಡ್ಡಿಕೊಂಡರೆ ಹೀಟ್ ಸ್ಟ್ರೋಕ್ಗೆ ಕಾರಣವಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಶಿಶುಗಳು, ವೃದ್ಧರು, ಹೊರಗೆ ಕೆಲಸ ಮಾಡುವವರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೆಚ್ಚು ಪರಿಣಾಮ ಬೀರಲಿದೆ. ಇದರಿಂದ ಅತಿಯಾಗಿ ಬೆವರುವುದು, ನಿರ್ಜಲೀಕರಣ, ಆಯಾಸ ಮತ್ತು ಶಾಖಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯ ಹೆಚ್ಚುವ ಸಾಧ್ಯತೆಯಿದೆ.
ಎಪ್ರಿಲ್, ಮೇ ತಿಂಗಳಲ್ಲಿ ಮತ್ತಷ್ಟು ಏರಿಕೆ
ಹವಾಮಾನ ಇಲಾಖೆ ಹಿರಿಯ ವಿಜ್ಞಾನಿ ಎನ್. ಪುವಿಯರಸನ್ ಪ್ರಕಾರ, ಕರ್ನಾಟಕದ ಮೇಲೆ ಇರುವ ಪೂರ್ವ ಮಾರುತಗಳು ಕರಾವಳಿಯಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. "ಈ ಮಾರುತಗಳು ಭೂಮಿಯಿಂದ ಕರಾವಳಿಗೆ ಚಲಿಸುತ್ತವೆ, ಅವು ಕೆಲವೊಮ್ಮೆ ಅರೇಬಿಯನ್ ಸಮುದ್ರದಿಂದ ತೇವಾಂಶವನ್ನು ಸೆಳೆಯುತ್ತವೆ. ಇದರಿಂದ ಕರಾವಳಿಯಲ್ಲಿ ಆರ್ದ್ರತೆಯ ಮಟ್ಟ ಹೆಚ್ಚಾಗುತ್ತದೆ. ಹಗಲಿನ ಸಮಯದಲ್ಲಿ ಭೂಮಿ ಭಾರೀ ಬಿಸಿಯಾಗುತ್ತದೆ, ಮತ್ತು ಈ ಬೆಚ್ಚಗಿನ ಗಾಳಿಯು ಕರಾವಳಿಯ ಕಡೆಗೆ ಚಲಿಸುತ್ತದೆ, ಇದು ತಾಪಮಾನವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ವಿಜ್ಞಾನಿ ಹೇಳಿದ್ದಾರೆ.
The Indian Meteorological Department (IMD) has issued a heatwave/yellow alert for the coastal regions of Karnataka, warning of a significant rise in temperatures. The alert predicts hot and humid conditions in Udupi, Dakshina Kannada, and Uttara Kannada districts on February 26 and 27, with maximum temperatures expected to rise further.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm