ಬ್ರೇಕಿಂಗ್ ನ್ಯೂಸ್
27-02-25 05:48 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಒಣಹುಲ್ಲು ಸುಟ್ಟರೆ ಹೊಸ ಚಿಗುರು ಬರುತ್ತದೆ. ತನ್ನ ಮೇಕೆಗಳಿಗೆ ಮೇವು ಸಿಗುತ್ತದೆಂಬ ದುರಾಲೋಚನೆಯಿಂದ ವ್ಯಕ್ತಿಯೊಬ್ಬ ಅರಣ್ಯ ಪ್ರದೇಶದ ಒಣ ಹುಲ್ಲಿಗೆ ಬೆಂಕಿ ಇಟ್ಟ ಪರಿಣಾಮ ಸುಮಾರು 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.
ರಾಜಪ್ಪ (42) ಎಂಬಾತ ತನ್ನ ಮೇಕೆಗಳನ್ನು ಮೇಯಿಸಲು ಸಂಗಮ ವನ್ಯಜೀವಿ ವಲಯದ ಅರಣ್ಯ ಪ್ರದೇಶಕ್ಕೆ ತೆರಳುತ್ತಿದ್ದ. ಅರಣ್ಯದಲ್ಲಿ ಹುಲ್ಲು ಒಣಗಿದ್ದನ್ನು ನೋಡಿದ ಆತ, ಇದನ್ನು ಸುಟ್ಟರೆ ಬೇಗನೆ ಹೊಸ ಹುಲ್ಲು ಚಿಗುರುತ್ತದೆ, ಆಗ ಕುರಿ-ಮೇಕೆಗಳಿಗೆ ಮೇವು ಲಭ್ಯವಾಗುತ್ತದೆ ಎಂದು ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಹುಲ್ಲು ಹೊತ್ತಿಕೊಂಡು 10 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಅಗ್ನಿ ಅವಘಡ ಸುದ್ದಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದಾಗಲೇ 10 ಎಕರೆ ಅರಣ್ಯ ಭಸ್ಮವಾಗಿತ್ತು. ಈ ಅವಘಡದಲ್ಲಿ ಕೆಲವು ವನ್ಯಜೀವಿಗಳು ಸಹ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಘಟನೆ ನಡೆದ ಸ್ಥಳದಲ್ಲೇ ರಾಜಪ್ಪ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಆತ ತಾನೇ ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A misguided attempt to create fresh grass for grazing led to a devastating forest fire in the Sangama Wildlife Sanctuary, Doddalahalli, Kanakapura taluk. A man set dry grass on fire, believing it would promote new growth, but ended up destroying 10 acres of forest land.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm