ಬ್ರೇಕಿಂಗ್ ನ್ಯೂಸ್
27-02-25 05:48 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಒಣಹುಲ್ಲು ಸುಟ್ಟರೆ ಹೊಸ ಚಿಗುರು ಬರುತ್ತದೆ. ತನ್ನ ಮೇಕೆಗಳಿಗೆ ಮೇವು ಸಿಗುತ್ತದೆಂಬ ದುರಾಲೋಚನೆಯಿಂದ ವ್ಯಕ್ತಿಯೊಬ್ಬ ಅರಣ್ಯ ಪ್ರದೇಶದ ಒಣ ಹುಲ್ಲಿಗೆ ಬೆಂಕಿ ಇಟ್ಟ ಪರಿಣಾಮ ಸುಮಾರು 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.
ರಾಜಪ್ಪ (42) ಎಂಬಾತ ತನ್ನ ಮೇಕೆಗಳನ್ನು ಮೇಯಿಸಲು ಸಂಗಮ ವನ್ಯಜೀವಿ ವಲಯದ ಅರಣ್ಯ ಪ್ರದೇಶಕ್ಕೆ ತೆರಳುತ್ತಿದ್ದ. ಅರಣ್ಯದಲ್ಲಿ ಹುಲ್ಲು ಒಣಗಿದ್ದನ್ನು ನೋಡಿದ ಆತ, ಇದನ್ನು ಸುಟ್ಟರೆ ಬೇಗನೆ ಹೊಸ ಹುಲ್ಲು ಚಿಗುರುತ್ತದೆ, ಆಗ ಕುರಿ-ಮೇಕೆಗಳಿಗೆ ಮೇವು ಲಭ್ಯವಾಗುತ್ತದೆ ಎಂದು ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಹುಲ್ಲು ಹೊತ್ತಿಕೊಂಡು 10 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಅಗ್ನಿ ಅವಘಡ ಸುದ್ದಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದಾಗಲೇ 10 ಎಕರೆ ಅರಣ್ಯ ಭಸ್ಮವಾಗಿತ್ತು. ಈ ಅವಘಡದಲ್ಲಿ ಕೆಲವು ವನ್ಯಜೀವಿಗಳು ಸಹ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಘಟನೆ ನಡೆದ ಸ್ಥಳದಲ್ಲೇ ರಾಜಪ್ಪ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಆತ ತಾನೇ ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A misguided attempt to create fresh grass for grazing led to a devastating forest fire in the Sangama Wildlife Sanctuary, Doddalahalli, Kanakapura taluk. A man set dry grass on fire, believing it would promote new growth, but ended up destroying 10 acres of forest land.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
16-02-26 09:33 am
Mangaluru Staffer
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am