ಬ್ರೇಕಿಂಗ್ ನ್ಯೂಸ್
27-02-25 05:48 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಒಣಹುಲ್ಲು ಸುಟ್ಟರೆ ಹೊಸ ಚಿಗುರು ಬರುತ್ತದೆ. ತನ್ನ ಮೇಕೆಗಳಿಗೆ ಮೇವು ಸಿಗುತ್ತದೆಂಬ ದುರಾಲೋಚನೆಯಿಂದ ವ್ಯಕ್ತಿಯೊಬ್ಬ ಅರಣ್ಯ ಪ್ರದೇಶದ ಒಣ ಹುಲ್ಲಿಗೆ ಬೆಂಕಿ ಇಟ್ಟ ಪರಿಣಾಮ ಸುಮಾರು 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.
ರಾಜಪ್ಪ (42) ಎಂಬಾತ ತನ್ನ ಮೇಕೆಗಳನ್ನು ಮೇಯಿಸಲು ಸಂಗಮ ವನ್ಯಜೀವಿ ವಲಯದ ಅರಣ್ಯ ಪ್ರದೇಶಕ್ಕೆ ತೆರಳುತ್ತಿದ್ದ. ಅರಣ್ಯದಲ್ಲಿ ಹುಲ್ಲು ಒಣಗಿದ್ದನ್ನು ನೋಡಿದ ಆತ, ಇದನ್ನು ಸುಟ್ಟರೆ ಬೇಗನೆ ಹೊಸ ಹುಲ್ಲು ಚಿಗುರುತ್ತದೆ, ಆಗ ಕುರಿ-ಮೇಕೆಗಳಿಗೆ ಮೇವು ಲಭ್ಯವಾಗುತ್ತದೆ ಎಂದು ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಹುಲ್ಲು ಹೊತ್ತಿಕೊಂಡು 10 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಅಗ್ನಿ ಅವಘಡ ಸುದ್ದಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದಾಗಲೇ 10 ಎಕರೆ ಅರಣ್ಯ ಭಸ್ಮವಾಗಿತ್ತು. ಈ ಅವಘಡದಲ್ಲಿ ಕೆಲವು ವನ್ಯಜೀವಿಗಳು ಸಹ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಘಟನೆ ನಡೆದ ಸ್ಥಳದಲ್ಲೇ ರಾಜಪ್ಪ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಆತ ತಾನೇ ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A misguided attempt to create fresh grass for grazing led to a devastating forest fire in the Sangama Wildlife Sanctuary, Doddalahalli, Kanakapura taluk. A man set dry grass on fire, believing it would promote new growth, but ended up destroying 10 acres of forest land.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm