ಬ್ರೇಕಿಂಗ್ ನ್ಯೂಸ್
27-02-25 05:50 pm HK News Desk ಕರ್ನಾಟಕ
ಕಾರವಾರ, ಫೆ 27: ಗುಜರಿ ಸಾಮಾನು ರಾಶಿ ಹಾಕಿದ್ದ ಗೋಡೌನ್ಗೆ ಬೆಂಕಿ ಹೊತ್ತಿಕೊಂಡು, ಲಾರಿಸಹಿತ ಅಪಾರ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿತು.
ಗುಣವಂತೆ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿಯೇ ರಾಶಿ ಹಾಕಿದ್ದ ಗುಜರಿ ಸಾಮಾನು ಅಂಗಡಿಗೆ ಬೆಂಕಿ ಬಿದ್ದಿದೆ. ಮಧ್ಯಾಹ್ನದ ಸುಡು ಬಿಸಿಲಿನ ವೇಳೆ ಘಟನೆ ನಡೆಯಿತು. ನೋಡನೋಡುತ್ತಿದ್ದಂತೆ ಜ್ವಾಲೆ ಸಂಪೂರ್ಣ ಅಂಗಡಿಯನ್ನೇ ಆವರಿಸಿಕೊಂಡಿತು. ದಟ್ಟ ಹೊಗೆಯಿಂದ ಸಂಪೂರ್ಣ ಪ್ರದೇಶ ಕಾಣದಂತಾಗಿ ಅಂಗಡಿ ಪಕ್ಕದಲ್ಲೇ ಇದ್ದ ಲಾರಿ ಕೂಡ ಬೆಂಕಿಗೆ ಆಹುತಿಯಾಯಿತು.
ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆರದ ಕಾರಣ ಮತ್ತು ಪಕ್ಕದ ಪ್ರದೇಶಕ್ಕೂ ಆವರಿಸಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಭಟ್ಕಳ ಅಗ್ನಿಶಾಮಕ ತಂಡಕ್ಕೂ ಮಾಹಿತಿ ನೀಡಲಾಯಿತು. ಇದೀಗ ಈ ಪ್ರದೇಶ ಸಂಪೂರ್ಣ ಹೊಗೆ ಹಾಗೂ ಬೆಂಕಿಯಿಂದ ಆವೃತವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Honnavara scrap godown catches fire, truck including items burnt into ashes.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm