ಬ್ರೇಕಿಂಗ್ ನ್ಯೂಸ್
28-02-25 11:51 am HK News Desk ಕರ್ನಾಟಕ
ಹಾಸನ, ಫೆ.28 : ನಿಧಾನಗತಿಯ ಕಾಮಗಾರಿಯಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟಾಸ್ಕ್ ನೀಡಲಾಗಿದೆ. ಇದಕ್ಕಾಗಿ ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ಹಾಸನ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.
ಸಂಸದ ಶ್ರೇಯಸ್ ಪಟೇಲ್ ಸಕಲೇಶಪುರದಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ವೇಳೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಈ ವೇಳೆ, ಘಾಟ್ ಹೆದ್ದಾರಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೋರಿದ್ದಾರೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.

ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಒಂದು ಭಾಗಕ್ಕೆ ಕಾಂಕ್ರೀಟ್ ಹಾಕಿ, ಕ್ಯೂರಿಂಗ್ ಆಗಲು 25 ದಿನಗಳು ಬೇಕಾಗುತ್ತದೆ. ಹಾಗಾಗಿ ಈ ವೇಳೆ ವಾಹನ ಸಂಚಾರದಿಂದ ಸಮಸ್ಯೆಯಾಗುವುದರಿಂದ ಸಂಚಾರ ನಿಷೇಧ ಮಾಡಿದರೆ ಉತ್ತಮ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ತಿಳಿಸಿದರು.
ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಿ, ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದು ವಿಭಾಗಾಧಿಕಾರಿ ತಿಳಿಸಿದ್ದಾರೆ.
ಸಕಲೇಶಪುರದ ದೋಣಿಗಲ್ ಕ್ರಾಸ್ನಿಂದ ಮಾರನಹಳ್ಳಿ ವರೆಗೆ 10 ಕಿ.ಮೀ. ಚತುಷ್ಪಥ ಕಾಂಕ್ರೀಟ್ ರಸ್ತೆಯಲ್ಲಿ ಈ ವರೆಗೆ 4.8 ಕಿ.ಮೀ. ರಸ್ತೆ ನಿರ್ಮಾಣ ಮಾತ್ರ ಆಗಿದೆ. ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿದ್ದಾರೆ.
The National Highways Authority of India (NHAI) has proposed suspending vehicular movement on Shiradi Ghat for at least a month to expedite the four-lane highway construction on the Bengaluru-Mangaluru National Highway-75.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am