ಬ್ರೇಕಿಂಗ್ ನ್ಯೂಸ್
28-02-25 11:51 am HK News Desk ಕರ್ನಾಟಕ
ಹಾಸನ, ಫೆ.28 : ನಿಧಾನಗತಿಯ ಕಾಮಗಾರಿಯಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟಾಸ್ಕ್ ನೀಡಲಾಗಿದೆ. ಇದಕ್ಕಾಗಿ ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ಹಾಸನ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.
ಸಂಸದ ಶ್ರೇಯಸ್ ಪಟೇಲ್ ಸಕಲೇಶಪುರದಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ವೇಳೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಈ ವೇಳೆ, ಘಾಟ್ ಹೆದ್ದಾರಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೋರಿದ್ದಾರೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.

ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಒಂದು ಭಾಗಕ್ಕೆ ಕಾಂಕ್ರೀಟ್ ಹಾಕಿ, ಕ್ಯೂರಿಂಗ್ ಆಗಲು 25 ದಿನಗಳು ಬೇಕಾಗುತ್ತದೆ. ಹಾಗಾಗಿ ಈ ವೇಳೆ ವಾಹನ ಸಂಚಾರದಿಂದ ಸಮಸ್ಯೆಯಾಗುವುದರಿಂದ ಸಂಚಾರ ನಿಷೇಧ ಮಾಡಿದರೆ ಉತ್ತಮ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ತಿಳಿಸಿದರು.
ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಿ, ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದು ವಿಭಾಗಾಧಿಕಾರಿ ತಿಳಿಸಿದ್ದಾರೆ.
ಸಕಲೇಶಪುರದ ದೋಣಿಗಲ್ ಕ್ರಾಸ್ನಿಂದ ಮಾರನಹಳ್ಳಿ ವರೆಗೆ 10 ಕಿ.ಮೀ. ಚತುಷ್ಪಥ ಕಾಂಕ್ರೀಟ್ ರಸ್ತೆಯಲ್ಲಿ ಈ ವರೆಗೆ 4.8 ಕಿ.ಮೀ. ರಸ್ತೆ ನಿರ್ಮಾಣ ಮಾತ್ರ ಆಗಿದೆ. ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿದ್ದಾರೆ.
The National Highways Authority of India (NHAI) has proposed suspending vehicular movement on Shiradi Ghat for at least a month to expedite the four-lane highway construction on the Bengaluru-Mangaluru National Highway-75.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm