ಬ್ರೇಕಿಂಗ್ ನ್ಯೂಸ್
28-02-25 05:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.28 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವ್ಯಕ್ತಿಯೊಬ್ಬ ಭದ್ರತೆಗೆ ನಿಯೋಜಿಸಲ್ಪಟ್ಟ ಸಿಐಎಸ್ಎಫ್ ಸಿಬ್ಬಂದಿಗೆ ಹಲ್ಲೆಗೈದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಆಸ್ಟ್ರೇಲಿಯನ್ ಮತ್ತು ಯುಕೆ ಪಾಸ್ಪೋರ್ಟ್ಗಳನ್ನು ಹೊಂದಿರುವ ಫಾಯಿಲ್ಸ್ ಎಲಿಯಟ್ ಬ್ಲೇರ್ ಎಂಬ ವಿದೇಶಿ ವ್ಯಕ್ತಿ ಭದ್ರತಾ ಸಿಬ್ಬಂದಿ, ಇನ್ನೊಬ್ಬ ಮಹಿಳೆ ಸೇರಿ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆ ಬೆನ್ನಲ್ಲೇ ವಿದೇಶಿಗನನ್ನು ವಶಕ್ಕೆ ಪಡೆದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬುಧವಾರ ರಾತ್ರಿ 10.20ಕ್ಕೆ ನಿರ್ಗಮನ ವಲಯದಲ್ಲಿ ಭದ್ರತಾ ತಪಾಸಣೆ ನಡೆಯುತ್ತಿತ್ತು. ಸರತಿ ಸಾಲಿನಲ್ಲಿ ಬಂದಿದ್ದ ಬ್ಲೇರ್ ಅವರ ಬ್ಯಾಗ್ ಗಳನ್ನೂ ಸಿಐಎಸ್ಎಫ್ ಸಿಬ್ಬಂದಿ ತಪಾಸಣೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಸಿಬ್ಬಂದಿಗಳ ಮೇಲೆ ವ್ಯಕ್ತಿ ಹೌಹಾರಿದ್ದಾನೆ. ಸಿಐಎಸ್ಎಫ್ ಕಾನ್ಸ್ಟೇಬಲ್ ರಾಮ್ಕುಮಾರ್ ದಲೇರಾ ಅವರನ್ನು ನಿಂದಿಸಿದ್ದಾನೆ. ಆತನನ್ನು ಸಮಾಧಾನಪಡಿಸಲು ಯತ್ನಿಸಿದ ಇತರೇ ಸಿಬ್ಬಂದಿಗಳನ್ನೂ ನಿಂದಿಸಿದ್ದಾನೆ. ಪ್ರಶ್ನೆ ಮಾಡಿದ್ದಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಹಾಗೂ ಇತರ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಳಿಕ ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಅರವಿಂದ್ ಕುಮಾರ್ ಮಿಶ್ರಾ ವಿದೇಶಿ ವ್ಯಕ್ತಿಯ ವಿರುದ್ದ ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ವಿಮಾನ ಯಾನಕ್ಕೂ ಅವಕಾಶ ನೀಡಲಾಗಿಲ್ಲ ಎಂದು ಅರವಿಂದ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
Foreigner Assaults CISF Personnel and Female Passenger at Kempegowda Airport.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am