ಬ್ರೇಕಿಂಗ್ ನ್ಯೂಸ್
28-02-25 05:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.28 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವ್ಯಕ್ತಿಯೊಬ್ಬ ಭದ್ರತೆಗೆ ನಿಯೋಜಿಸಲ್ಪಟ್ಟ ಸಿಐಎಸ್ಎಫ್ ಸಿಬ್ಬಂದಿಗೆ ಹಲ್ಲೆಗೈದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಆಸ್ಟ್ರೇಲಿಯನ್ ಮತ್ತು ಯುಕೆ ಪಾಸ್ಪೋರ್ಟ್ಗಳನ್ನು ಹೊಂದಿರುವ ಫಾಯಿಲ್ಸ್ ಎಲಿಯಟ್ ಬ್ಲೇರ್ ಎಂಬ ವಿದೇಶಿ ವ್ಯಕ್ತಿ ಭದ್ರತಾ ಸಿಬ್ಬಂದಿ, ಇನ್ನೊಬ್ಬ ಮಹಿಳೆ ಸೇರಿ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆ ಬೆನ್ನಲ್ಲೇ ವಿದೇಶಿಗನನ್ನು ವಶಕ್ಕೆ ಪಡೆದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬುಧವಾರ ರಾತ್ರಿ 10.20ಕ್ಕೆ ನಿರ್ಗಮನ ವಲಯದಲ್ಲಿ ಭದ್ರತಾ ತಪಾಸಣೆ ನಡೆಯುತ್ತಿತ್ತು. ಸರತಿ ಸಾಲಿನಲ್ಲಿ ಬಂದಿದ್ದ ಬ್ಲೇರ್ ಅವರ ಬ್ಯಾಗ್ ಗಳನ್ನೂ ಸಿಐಎಸ್ಎಫ್ ಸಿಬ್ಬಂದಿ ತಪಾಸಣೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಸಿಬ್ಬಂದಿಗಳ ಮೇಲೆ ವ್ಯಕ್ತಿ ಹೌಹಾರಿದ್ದಾನೆ. ಸಿಐಎಸ್ಎಫ್ ಕಾನ್ಸ್ಟೇಬಲ್ ರಾಮ್ಕುಮಾರ್ ದಲೇರಾ ಅವರನ್ನು ನಿಂದಿಸಿದ್ದಾನೆ. ಆತನನ್ನು ಸಮಾಧಾನಪಡಿಸಲು ಯತ್ನಿಸಿದ ಇತರೇ ಸಿಬ್ಬಂದಿಗಳನ್ನೂ ನಿಂದಿಸಿದ್ದಾನೆ. ಪ್ರಶ್ನೆ ಮಾಡಿದ್ದಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಹಾಗೂ ಇತರ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಳಿಕ ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಅರವಿಂದ್ ಕುಮಾರ್ ಮಿಶ್ರಾ ವಿದೇಶಿ ವ್ಯಕ್ತಿಯ ವಿರುದ್ದ ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ವಿಮಾನ ಯಾನಕ್ಕೂ ಅವಕಾಶ ನೀಡಲಾಗಿಲ್ಲ ಎಂದು ಅರವಿಂದ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
Foreigner Assaults CISF Personnel and Female Passenger at Kempegowda Airport.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm