ಬ್ರೇಕಿಂಗ್ ನ್ಯೂಸ್
28-02-25 05:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.28 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವ್ಯಕ್ತಿಯೊಬ್ಬ ಭದ್ರತೆಗೆ ನಿಯೋಜಿಸಲ್ಪಟ್ಟ ಸಿಐಎಸ್ಎಫ್ ಸಿಬ್ಬಂದಿಗೆ ಹಲ್ಲೆಗೈದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಆಸ್ಟ್ರೇಲಿಯನ್ ಮತ್ತು ಯುಕೆ ಪಾಸ್ಪೋರ್ಟ್ಗಳನ್ನು ಹೊಂದಿರುವ ಫಾಯಿಲ್ಸ್ ಎಲಿಯಟ್ ಬ್ಲೇರ್ ಎಂಬ ವಿದೇಶಿ ವ್ಯಕ್ತಿ ಭದ್ರತಾ ಸಿಬ್ಬಂದಿ, ಇನ್ನೊಬ್ಬ ಮಹಿಳೆ ಸೇರಿ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆ ಬೆನ್ನಲ್ಲೇ ವಿದೇಶಿಗನನ್ನು ವಶಕ್ಕೆ ಪಡೆದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬುಧವಾರ ರಾತ್ರಿ 10.20ಕ್ಕೆ ನಿರ್ಗಮನ ವಲಯದಲ್ಲಿ ಭದ್ರತಾ ತಪಾಸಣೆ ನಡೆಯುತ್ತಿತ್ತು. ಸರತಿ ಸಾಲಿನಲ್ಲಿ ಬಂದಿದ್ದ ಬ್ಲೇರ್ ಅವರ ಬ್ಯಾಗ್ ಗಳನ್ನೂ ಸಿಐಎಸ್ಎಫ್ ಸಿಬ್ಬಂದಿ ತಪಾಸಣೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಸಿಬ್ಬಂದಿಗಳ ಮೇಲೆ ವ್ಯಕ್ತಿ ಹೌಹಾರಿದ್ದಾನೆ. ಸಿಐಎಸ್ಎಫ್ ಕಾನ್ಸ್ಟೇಬಲ್ ರಾಮ್ಕುಮಾರ್ ದಲೇರಾ ಅವರನ್ನು ನಿಂದಿಸಿದ್ದಾನೆ. ಆತನನ್ನು ಸಮಾಧಾನಪಡಿಸಲು ಯತ್ನಿಸಿದ ಇತರೇ ಸಿಬ್ಬಂದಿಗಳನ್ನೂ ನಿಂದಿಸಿದ್ದಾನೆ. ಪ್ರಶ್ನೆ ಮಾಡಿದ್ದಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಹಾಗೂ ಇತರ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಳಿಕ ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಅರವಿಂದ್ ಕುಮಾರ್ ಮಿಶ್ರಾ ವಿದೇಶಿ ವ್ಯಕ್ತಿಯ ವಿರುದ್ದ ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ವಿಮಾನ ಯಾನಕ್ಕೂ ಅವಕಾಶ ನೀಡಲಾಗಿಲ್ಲ ಎಂದು ಅರವಿಂದ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
Foreigner Assaults CISF Personnel and Female Passenger at Kempegowda Airport.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am