ಬ್ರೇಕಿಂಗ್ ನ್ಯೂಸ್
28-02-25 06:17 pm HK News Desk ಕರ್ನಾಟಕ
ಹಾಸನ, ಫೆ.28: ಯಾರು ಏನು ಹೇಳಿದ್ದಾರೆ ನನಗಂತು ಗೊತ್ತಿಲ್ಲ. ರಾಜ್ಯದ ಆಡಳಿತ ಪಕ್ಷದಲ್ಲಿ ದಿನೇ ದಿನೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು, ತಾವು ಮುಖ್ಯಮಂತ್ರಿ ಆಗಬೇಕು ಅಂತ ಅನೇಕರು ಕಾಯ್ತಾ ಇದ್ದಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಆಗೋ ತರಾ ಇದೆ. ಆ ಮುನ್ಸೂಚನೆಗಳನ್ನು ನೀವು ನೋಡುತ್ತಿದ್ದೀರಿ. ಹೀಗೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಡಿಕೆಶಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಅವರನ್ನು ಪ್ರಶ್ನೆ ಮಾಡಿ. ಸರ್ಕಾರ ಎಲ್ಲಿದೆ, ಕಾಂಗ್ರೆಸ್ ಒಂದು ರೀತಿ ತಾಲಿಬಾನ್ ಸರ್ಕಾರ ಮಾಡ್ತಿದೆ. ಹಿಂದೂತ್ವಕ್ಕೆ, ಹಿಂದೂಗಳಿಗೂ ಗೌರವವಿಲ್ಲ. ಈ ರೀತಿಯ ಪರಿಸ್ಥಿತಿ ಹಿಂದೆಂದೂ ನಿರ್ಮಾಣ ಆಗಿಲ್ಲ. ಪ್ರಯಾಗ್ರಾಜ್ನಲ್ಲಿ ಕುಂಭಮೇಳಕ್ಕೆ ಕಾಂಗ್ರೆಸ್ನವರು ತಕರಾರು ಎತ್ತಿದ್ರು. ಇದರ ಮಧ್ಯೆ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಕುಂಭಮೇಳಕ್ಕೆ ಹೋಗಿ ಬಂದಿದ್ದಾರೆ. ನಮ್ಮ ಪ್ರಾಚೀನತೆ ಆಧಾರದ ಮೇಲೆ ಹೋಗಿ ಬಂದಿದ್ದಾರೆ. ಬಿಜೆಪಿಗೂ ಆ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ.
ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರ ಜೊತೆ ಅವರು ಭಾಗವಹಿಸಿದ್ರು. ಇದರಿಂದ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಶಿವರಾತ್ರಿ ಸಂದರ್ಭದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೂ ರಾಜಕೀಯ ಧ್ರುವೀಕರಣದ ಕತೆ ಕಟ್ಟಿದಾರೆ. ಡಿ.ಕೆ.ಶಿವಕುಮಾರ್ ಬಿಜೆಪಿಗೆ ಬಂದು ಬಿಡ್ತಾರೆ ಈ ರೀತಿಯ ಗುಸು, ಗುಸು ಶುರುವಾಗಿದೆ. ಇದರಲ್ಲಿ ಯಾವುದರಲ್ಲಿ ಅರ್ಥವಿಲ್ಲ.
ನಾವು ಮುಖ್ಯಮಂತ್ರಿಗಳಿಗೆ ಬಹಿರಂಗವಾಗಿ ಪತ್ರ ಬರೆದಿದ್ದೇವೆ. ನಾಡಿನ ಜನರ ಅಪೇಕ್ಷೆಗೆ ತಕ್ಕಂತೆ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಬೇಕು. ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿರುವ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಹಾಗಾಗಿ ಜನರ ಅಪೇಕ್ಷೆನೂ ಕೂಡ ಸಾಕಷ್ಟಿದೆ. ಗ್ಯಾರೆಂಟಿಗಳೇ ಅಭಿವೃದ್ಧಿ ಆಗಿಬಿಟ್ಟರೆ ಶಾಸಕರುಗಳು ತಲೆ ಎತ್ತಿಕೊಂಡು ಓಡಾಡಲು ಸಾಧ್ಯವಿಲ್ಲ. ಜನರು ಕೂಡ ನಮ್ಮನ್ನು ಕ್ಷಮಿಸುವುದಿಲ್ಲ. ಇದನ್ನು ಅರ್ಥ ಮಾಡಿಕೊಂಡು ಮುಖ್ಯಮಂತ್ರಿಗಳು ಕ್ಷೇತ್ರಗಳಿಗೆ ಅನುದಾನ ನೀಡ್ತಾರೆಂಬ ವಿಶ್ವಾಸ ಇದೆ.
ಮೊದಲ ಬಾರಿ ಗೆದ್ದ ಶಾಸಕರಿಗೆ ಈವರೆಗೂ ಅನುದಾನ ನೀಡಿಲ್ಲ. ಇದರ ಬಗ್ಗೆಯೂ ಗಮನ ಹರಿಸಬೇಕಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡನೆ ಮಾಡ್ತಾರೆ ಎಂಬ ಆಶಾಭಾವನೆಯಲ್ಲಿ ನಾವು ಕೂಡ ಇದ್ದೇವೆ ಎಂದು ಹೇಳಿದರು.
B Y Vijayendra Reacts to DK's Strategic Maneuver, Insights into Rapid Political Developments in the State
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am