ಬ್ರೇಕಿಂಗ್ ನ್ಯೂಸ್
01-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.1: ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ. ಮಹಾರಾಷ್ಟ್ರದ ರೀತಿ ಇಲ್ಲಿ ಯಾವುದೇ ಬೆಳವಣಿಗೆ ನಡೆಯಲ್ಲ. ಏಕನಾಥ ಶಿಂಧೆ ರೀತಿ ಶಾಸಕರನ್ನು ಸೆಳೆದುಕೊಂಡು ಯಾರೂ ಬಿಜೆಪಿಗೆ ಹೋಗುವ ಸ್ಥತಿ ಬರೋದಿಲ್ಲ. ಅದೆಲ್ಲ ವದಂತಿ ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬಿ.ವೈ.ವಿಜಯೇಂದ್ರ ಹೇಳಿದಂತೆ ಕಾಂಗ್ರೆಸ್ನಲ್ಲಿ ಯಾವ ಕ್ಷಿಪ್ರ ಕ್ರಾಂತಿಯೂ ನಡೆಯುವುದಿಲ್ಲ. ಬಿಜೆಪಿಯಲ್ಲೇ ಹಲವು ಬಣಗಳ ಒಳ ಜಗಳವಿದೆ. ಅವರಲ್ಲೇ ಕ್ರಾಂತಿ ಆದರೂ ಆಗಬಹುದು. ಏಕನಾಥ ಶಿಂಧೆ ರೀತಿ ಕಾಂಗ್ರೆಸ್ ನಾಯಕರೊಬ್ಬರು ಶಾಸಕರ ಪಡೆಯೊಂದಿಗೆ ಬಿಜೆಪಿ ಸೇರುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿರುವುದು ಹಾಸ್ಯಾಸ್ಪದ ಎಂದರು ಜಾರಕಿಹೊಳಿ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈಶ ಫೌಂಡೇಷನ್ನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಜೊತೆ ಕಾಣಿಸಿಕೊಂಡ ಮಾತ್ರಕ್ಕೆ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಮುಖಂಡರು ವ್ಯಂಗ್ಯ ಮಾಡುತ್ತಿದ್ದರು. ರಾಜ್ಯಕ್ಕೆ ಆರ್ಥಿಕ ದುಸ್ಥಿತಿ ಬರುತ್ತದೆ ಎನ್ನುತ್ತಿದ್ದರು. ದೆಹಲಿ, ಮಹಾರಾಷ್ಟ್ರದಲ್ಲಿ ಅವರೂ ಗ್ಯಾರಂಟಿ ಕೊಟ್ಟಿದ್ದಾರೆ. ಅದನ್ನು ಹೇಗೆ ಜಾರಿ ಮಾಡುತ್ತಾರೋ ನೋಡೋಣ ಎಂದು ತಿಳಿಸಿದರು.
ಇದೇ ವೇಳೆ, ಡಿಕೆಶಿ ಬಗ್ಗೆ ವಿರೋಧಿ ಹೇಳಿಕೆ ನೀಡುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿ.ಕೆ.ಶಿವಕುಮಾರ್ ಸೋದರ ಡಿ.ಕೆ.ಸುರೇಶ್ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಖುದ್ದು ಭೇಟಿ ನೀಡಿದ ಡಿ.ಕೆ.ಸುರೇಶ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ. ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ’ ಸಂಬಂಧ ಇತ್ತೀಚೆಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದರು.
Reports of a possible coup attempt to dismantle the Congress government, Public Works Minister Satish Jarkiholi said on Friday there won’t be any Maharashtra-like development and that no leader would take the splinter group (of MLAs)
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am