ಬ್ರೇಕಿಂಗ್ ನ್ಯೂಸ್
02-03-25 02:10 pm HK News Desk ಕರ್ನಾಟಕ
ಬಳ್ಳಾರಿ, ಮಾ.2 : ಬಳ್ಳಾರಿ ಜಿಲ್ಲೆಯಾದ್ಯಂತ ಹಕ್ಕಿಜ್ವರ ಹಾವಳಿ ಕಾಣಿಸಿಕೊಂಡಿದ್ದು ಒಂದೇ ಫಾರಂನಲ್ಲಿ 8,000 ಕೋಳಿಗಳು ಸಾವನ್ನಪ್ಪಿದೆ. ನಿನ್ನೆ ಸಂಡೂರಲ್ಲಿ 2400 ಕೋಳಿಗಳ ಮಾರಣ ಹೋಮ ನಡೆದಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ಕೋಳಿ ಫಾರಂ ಬಳ್ಳಾರಿ ಜಿಲ್ಲೆಯಲ್ಲಿದ್ದು ಜ್ವರದ ಹಾವಳಿಯಿಂದಾಗಿ ಕುಕ್ಕುಟ ಉದ್ಯಮಕ್ಕೆ ಭಾರೀ ಪೆಟ್ಟು ಬೀಳಲಿದೆ.
ಬಳ್ಳಾರಿ ಹೊರವಲಯದ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ವಾರದಿಂದ ಈಚೆಗೆ 8 ಸಾವಿರ ಕೋಳಿಗಳು ಸಾವಿಗೀಡಾಗಿವೆ. ಕೋಳಿ ಸಾವಿಗೆ ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಪರೀಕ್ಷೆಗಾಗಿ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿದೆ.
'ರವಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಕೋಳಿಗಳ ಮರಣಮೃದಂಗ ನಿರಂತರವಾಗಿದೆ. ಮೊದಲು 15 ಸಾವಿರ ಕೋಳಿಗಳಿದ್ದವು, ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಸದ್ಯ 7 ಸಾವಿರ ಕೋಳಿಗಳು ಮಾತ್ರವೇ ಜೀವಂತ ಇವೆ. ಇನ್ನೂ, ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆ ಇದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಮೃತ ಕೋಳಿಗಳ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಅದನ್ನು ಭೋಪಾಲ್ನಲ್ಲಿರುವ 'ರಾಷ್ಟ್ರೀಯ ಉನ್ನತ ಪ್ರಾಣಿ ರೋಗಗಳ ಸಂಸ್ಥೆ'ಗೆ ರವಾನಿಸಿ ಪರೀಕ್ಷೆ ನಡೆಸಲಾಗುವುದು. ಸೋಮವಾರದ ವೇಳೆಗೆ ಪರೀಕ್ಷಾ ವರದಿ ಬರಬಹುದು. ಹಕ್ಕಿ ಜ್ವರ ಇರುವುದು ದೃಢಪಟ್ಟರೆ, ಉಳಿದ ಕೋಳಿಗಳನ್ನೂ ವಧೆ ಮಾಡಲಾಗುವುದು ಎಂದು ಇಲಾಖೆಯ ಉಪನಿರ್ದೇಶಕ ಡಾ. ಕಾರಬಾರಿ ಅವರು ಮಾಹಿತಿ ನೀಡಿದ್ದಾರೆ.
'ಜಿಲ್ಲೆಯಲ್ಲಿ ಹಕ್ಕಿ ಜ್ವರ ತಡೆಯಲು ಮತ್ತು ಪರಿಶೀಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಪಶು ಸಂಗೋಪನಾ ಇಲಾಖೆಯು 10 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ನಿತ್ಯ ಇಲಾಖೆಗೆ ವರದಿ ನೀಡಲಿವೆ. ಬಳ್ಳಾರಿ ಜಿಲ್ಲೆಯು ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಚೆಕ್ಪೋಸ್ಟ್ಗಳಲ್ಲೂ ಪರಿಶೀಲನೆ ನಡೆದಿದೆ. ಬಳ್ಳಾರಿಯಲ್ಲಿ ಒಟ್ಟು 74 ಕೋಳಿ ಫಾರಂಗಳಿವೆ. 14 ಮೊಟ್ಟೆ ಸಂವರ್ಧನಾ ಕೇಂದ್ರಗಳಿವೆ. ಇವುಗಳ ಮೇಲೂ ನಿಗಾ ವಹಿಸಲಾಗಿದೆ ಎಂದವರು ತಿಳಿಸಿದ್ದಾರೆ.
To prevent the spread of Avian influenza, commonly known as bird flu, the Karnataka government has initiated mass culling. Bird flu is a viral disease that mainly impacts poultry but can sometimes affect mammals, including humans and pigs.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am