ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm