ಬ್ರೇಕಿಂಗ್ ನ್ಯೂಸ್
03-03-25 12:33 pm HK News Desk ಕರ್ನಾಟಕ
ಮೈಸೂರು, ಮಾ 03: "ನಟ-ನಟಿಯರು ಕನ್ನಡಿಗರಿಂದಲೇ ಕನ್ನಡ ನೆಲದಲ್ಲಿ ಸ್ಟಾರ್ ಆಗಿರುವುದು. ನಿಮಗೆ ಸಿನಿಮಾಗಳಿಗೆ ಸಬ್ಸಿಡಿ ಬೇಕು ಅಂದಾಗ, ನಮ್ಮ ಬಳಿ ಬರ್ತೀರ, ಆದ್ರೆ ಕನ್ನಡದ ನೆಲ, ಜಲ, ಭಾಷೆ ಬೇಡವೇ? ನಟ್ಟು, ಬೋಲ್ಟ್ ನಾಳೆ ಅಲ್ಲ, ಇವತ್ತೇ ಟೈಟ್ ಮಾಡ್ಬೇಕು" ಎಂದು ಡಿಕೆಶಿ ಹೇಳಿಕೆಯನ್ನ ಶಾಸಕ ಶಾಸಕ ರವಿಕುಮಾರ್ ಗಣಿಗ ಸಮರ್ಥಿಸಿಕೊಂಡರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ ಮಾಡಿರುವ ರೀತಿಯಲ್ಲೇ ನಾವೂ ಮಾಡಬೇಕು. ಕನ್ನಡದ ಕಾರ್ಯಕ್ರಮ ಎಂದರೆ ಕನ್ನಡದ ನಟರಿಗೆ ಏಕೆ ಅಸಡ್ಡೆ?. ವಿಧಾನಸೌಧದ ಮುಂದೆ ನಿಮಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಮರ್ಯಾದೆಯಿಂದ ಆಹ್ವಾನ ಕಳುಹಿಸಿದ್ದರೆ ಏಕೆ ಬರುವುದಿಲ್ಲ?. ಕ್ಯಾನ್ಸರ್ ಕಾಯಿಲೆಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ಶಿವರಾಜ್ ಕುಮಾರ್ ಬಂದಿದ್ದಾರೆ. ಇನ್ನುಳಿದವರಿಗೆ ಏನಾಗಿದೆ. ನಮ್ಮ ಸರ್ಕಾರ ಪ್ರಶಸ್ತಿ ಕೊಟ್ಟರೆ ಬೇಡ ಎನ್ನುತ್ತೀರಿ. ಅದೇ ಬಾಲಿವುಡ್ನವರು ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೆದುಕೊಳ್ಳುತ್ತೀರಿ" ಎಂದು ಕಿಡಿಕಾರಿದರು.
ಡಾ.ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೆಲ್ಲ ರಾಜ್ಯೋತ್ಸವಕ್ಕೂ ಬರುತ್ತಿದ್ದರು. ಅಭಿಮಾನಿಗಳು ಅವರನ್ನು ಹೊತ್ತು ಮೆರೆಸಿದ್ದಕ್ಕೆ ಅವರು ಸ್ಟಾರ್ಗಳಾಗಿದ್ದು. ಈಗಿನ ನಟರಲ್ಲಿ ದರ್ಶನ್ ಹೊರತುಪಡಿಸಿ ಎಷ್ಟು ಜನ ರಾಜ್ಯೋತ್ಸವ ಸಮಾರಂಭಕ್ಕೆ ಬರುತ್ತಾರೆ?. ಇದೆಲ್ಲವನ್ನೂ ನಾವು ಪ್ರಶ್ನೆ ಮಾಡಬಾರದೇ?. ಕಾರ್ಯಕ್ರಮಕ್ಕೆ ಬರುವುದು ನಿಮ್ಮ ವಿವೇಚನೆಯಾದರೆ. ನಿಮ್ಮ ಸಿನಿಮಾ ನೋಡಬೇಕೇ ಬೇಡವೇ ಅನ್ನುವುದು ನಮ್ಮ ವಿವೇಚನೆ ಎಂದು ಶಾಸಕ ಗಣಿಕ ಎಚ್ಚರಿಕೆ ರವಾನಿಸಿದರು.
Mysuru Mla Ravi Kumar ganiga supports DK remarks on Kannada film industry. ‘I Know Where to Tighten the Nuts and Bolts’: DK Shivakumar Explodes Over Low Celebrity Turnout at Film Festival
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm